ಪಿ. ಮುರಳೀಧರ ರಾವ್ 
ದೇಶ

ರಕ್ಷಣಾ ಮಂತ್ರಿ ನಿರ್ಮಲಾ ಸೀತಾರಾಮನ್ ನಕಲಿ ಸಹಿ: ಮುರಳಿಧರ ರಾವ್ ಸೇರಿ 9 ಮಂದಿ ವಿರುದ್ಧ ಪ್ರಕರಣ

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಕಲಿ ಸಹಿ ಬಳಸಿ ಪತ್ರ ತಯಾರಿಕೆ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಬಿಜೆಪಿ ಪ್ರಧಾನ ಕಾರ್ಯದರ್ಶಿ,...

ಹೈದರಾಬಾದ್: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಕಲಿ ಸಹಿ ಬಳಸಿ ಪತ್ರ ತಯಾರಿಕೆ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ಪಿ. ಮುರಳಿಧರ ರಾವ್ ಸೇರಿ 9 ಮಂದಿಯ ವಿರುದ್ಧ ಹೈದರಾಬಾದ್ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೈದರಾಬಾದ್ ರಿಯಲ್ ಎಸ್ಟೇಟ್ ಉದ್ಯಮಿ ಮಹಿಪಾಲ್ ರೆಡ್ಡಿ ಪತ್ನಿ ಟಿ. ಪ್ರವರ್ಣ ರೆಡ್ಡಿ ಎನ್ನುವವರು ನೀಡಿದ ದೂರಿನ ಹಿನ್ನೆಲೆಯಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ಫಾರ್ಮಾ ಎಕ್ಸಿಲ್ ಅಧ್ಯಕ್ಷ ಸ್ಥಾನ ಕೊಡಿಸುವ ಆಮಿಷ ಒಡ್ಡಿ ಮುರಳಿಧರ ರಾವ್ ಹಾಗೂ ಇತರರು ರೆಡ್ಡಿಯವರಿಂದ ೨.೧೭ ಕೋಟಿ ರು ಪಡೆದು ವಂಚಿಸಿದ್ದಾರೆ, ಈ ವೇಳೆ ನಿರ್ಮಲಾ ಸೀತಾರಾಮನ್ ಅವರ ನಕಲಿ ಸಹಿ ಇದ್ದ ಪತ್ರವನ್ನು ನಮಗೆ ತೋರಿಸಿದ್ದ ಕಾರಣಕ್ಕೆ ನಾವು ರಾವ್ ಅವರಿಗೆ ಹಣ ನೀಡಿದೆವು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆದರೆ ಮುರಳಿಧರರಾವ್ ಮಾತ್ರ "ಈ ಪ್ರಕರಣಕ್ಕೆ, ನಮಗೆ ಸಂಬಂಧವಿಲ್ಲ" ಎಂದು ತಮ್ಮ ಮೇಲಿನ ಆರೋಪವನ್ನು ಸಾರಾಸಗಟು ನಿರಾಕರಿಸಿದ್ದಾರೆ.
ಐಪಿಸಿ ಸೆಕ್ಷನ್ ೪೦೬೯ಕ್ರಿಮ್ಮಿನಲ್ ವಿಶ್ವಾಸ ದ್ರೋಹ), ೪೨೦ (ವಂಚನೆ), ೪೭೧(ನಕಲಿ ಸಹಿ), ೫೦೬ (ಕ್ರಿಮಿನಲ್ ದುರುದ್ದೇಶ), ೧೨೦-ಬಿ (ಕ್ರಿಮಿನಲ್ ಪಿತೂರಿ), ಸಿಆರ್ ಪಿಸಿ ಸೆಕ್ಷನ್ ೧೫೬(೩) ಅಡಿಯಲ್ಲಿ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT