ಪುಲ್ವಾಮಾ ದಾಳಿ- ಸಂಗ್ರಹ ಚಿತ್ರ 
ದೇಶ

ಪುಲ್ವಾಮಾ ದಾಳಿಯ ಕುರಿತ ಪಾಕಿಸ್ತಾನದ ಹೇಳಿಕೆಯಿಂದ ನಿರಾಶೆಯಾಗಿದೆ: ಭಾರತ ವಿದೇಶಾಂಗ ಇಲಾಖೆ

ಪುಲ್ವಾಮಾ ಉಗ್ರ ದಾಳಿಯಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆಯ ಕೈವಾಡವಿರುವುದನ್ನು ಒಪ್ಪಿಕೊಳ್ಳಲು ಪಾಕಿಸ್ತಾನ "ನಿಧಾನಿಸುತ್ತಿದೆ" ಎಂದಿರುವ ಭಾರತ ಗಡಿಯುದ್ದದ ಭಯೋತ್ಪಾದನೆ ಕುರಿತ ಫಾಕಿಸ್ತಾನ....

ನವದೆಹಲಿ: ಪುಲ್ವಾಮಾ ಉಗ್ರ ದಾಳಿಯಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆಯ ಕೈವಾಡವಿರುವುದನ್ನು ಒಪ್ಪಿಕೊಳ್ಳಲು ಪಾಕಿಸ್ತಾನ "ನಿಧಾನಿಸುತ್ತಿದೆ" ಎಂದಿರುವ ಭಾರತ ಗಡಿಯುದ್ದದ ಭಯೋತ್ಪಾದನೆ ಕುರಿತ ಫಾಕಿಸ್ತಾನದ ಪ್ರತಿಕ್ರಿಯೆಯಿಂದ ನಿರಾಶವಾಗಿರುವುದಾಗಿ ಹೇಳಿದೆ.
ಫೆಬ್ರವರಿ 14 ರ ಭಯೋತ್ಪಾದನಾ ದಾಳಿಯಲ್ಲಿ ಜೆಇಎಂ ಪಾತ್ರ ಹಾಗೂ ಭಾರತ ನಡೆಸಿದ್ದ ವಾಯುದಾಳಿಯಲ್ಲಿ ಪಾಕ್ ಆಳ್ವಿಕೆಯಲ್ಲಿನ ಕಾಶ್ಮೀರದಲ್ಲಿ ಉಗ್ರ ಶಿಬಿರಗಳು ಣಾಶವಾಗಿರುವುದಕ್ಕೆ ಹೆಚ್ಚಿನ ಮಾಹಿತಿ ಮತ್ತು ಪುರಾವೆಗಳನ್ನು ದೆಹಲಿ ನೀಡಬೇಕಿದೆ ಎಂದು ಪಾಕಿಸ್ತಾನ ಕೇಳಿದ್ದ ಒಂದು ದಿನದ ಬಳಿಕ ಭಾರತ ಈ ಪ್ರತಿಕ್ರಿಯೆ ನೀಡಿದೆ.
"ಪಾಕಿಸ್ತಾನದ ಭಯೋತ್ಪಾದನಾ ಶಿಬಿರಗಳು ಮತ್ತು ಪುಲ್ವಾಮಾ ದಾಳಿಯಲ್ಲಿ ಜೆಇಎಂ ಉಗ್ರ ಸಂಘಟನೆ ಪಾತ್ರ ಬಗೆಗಿನ ನಮ್ಮ ವಿವರವಾದ ದಾಖಲೆಗಳನ್ನು ನೋಡಿಯೂ ಪಾಕಿಸ್ತಾನ ಈ ರೀತಿ ಪ್ರತಿಕ್ರಯಿಸಿರುವುದು ನಮಗೆ ನಿರಾಸೆ ತಂದಿದೆ." ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.
"ವಿಷಾದನೀಯ ವಿಚಾರವೆಂದರೆ ತಮ್ಮ ನೆಲದಲ್ಲಿ ಉಗ್ರವಾದಿಗಳಿರುವುದನ್ನು ಪಾಕಿಸ್ತಾನ ಈಗಲೂ ನಿರಾಕರಿಸುತ್ತಿದೆ.ಮತ್ತು ಪುಲ್ವಾಮಾ ದಾಳಿಯನ್ನು ಒಂದು ಭಯೋತ್ಪಾದಕ ದಾಳಿ ಎಂದು ಒಪ್ಪಲು ಸಹ ನಿರಾಕರಿಸಿದೆ" ಎಂದು ಅವರು ಹೇಳಿದರು.
ಪಾಕಿಸ್ತಾನವು ಈ ಹಿಂದೆ ಇದೇ ರೀತಿಯ ವಾದವನ್ನು ಒಪ್ಪಿಸಿತ್ತು.ಇದು ಭಾರತಕ್ಕೇನೂ ಹೊಸದಲ್ಲ.  2008 ರ ಮುಂಬಯಿ ಭಯೋತ್ಪಾದಕ ದಾಳಿ ಅಥವಾ 2016 ರಲ್ಲಿ ಪಠಾಣ್ ಕೋಟ್ ದಾಳಿಯ ವೇಳೆ ಸಹ ಪಾಕ್ ಇದೇ ಬಗೆಯಲ್ಲಿ ವಾದ ಮಾಡಿದೆ.
ಪುಲ್ವಾಮಾ ದಾಳಿಯ ಕುರಿತು ಭಾರತ ನೀಡಿದ ಸಾಕ್ಷಾಧಾರವನ್ನು ಪಾಕ್ ಪರಿಶೀಲಿಸುತ್ತಿದೆ.ಅದರ ಮಣ್ಣಿನಿಂದ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕರು ಅಥವಾ ಭಯೋತ್ಪಾದಕ ಗುಂಪು ಈ ಕೃತ್ಯ ನಡೆಸಿವೆ ಎನ್ನಲು ಭಾರತ ನಂಬಲರ್ಹ ದಾಖಲೆಗಳನ್ನು ನೀಡಿಲ್ಲ ಎಂದು ಪಾಕಿಸ್ತಾನ ಮೊಂಡುವಾದ ಮಾಡಿದೆ.
ಭಾರತವು ಫೆಬ್ರುವರಿ 27 ರಂದು ಪಾಕಿಸ್ತಾನದ ಹೈಕಮಿಷನರ್ ಗೆ ಸಲ್ಲಿಸಿರುವ ದಾಖಲೆಗಳಲ್ಲಿ ಪುಲ್ವಾಮಾ ದಾಳಿಯನಿರ್ದಿಷ್ಟವಾದ ವಿವರಗಳೊಂದಿಗೆ ಜೆಇಎಂ ಪಾತ್ರದ ವಿವರಣೆ ನಿಡಿದೆ.ಅಲ್ಲದೆ ದಾಳಿಯಲ್ಲಿ 40  ಸಿಆರ್ ಪಿಎಫ್ ಸಿಬ್ಬಂದಿ ಹತರಾದದ್ದು, ಆನಂತರ ಭಾರತ ನಡೆಸಿದ್ದ ಏರ್ ಸ್ಟ್ರೈಕ್ ನಲ್ಲಿ ಪಾಕಿಸ್ತಾನದಲ್ಲಿ ಜೆಎಂ ಭಯೋತ್ಪಾದನಾ ಶಿಬಿರಗಳು ಮತ್ತು ಅದರ ನಾಯಕರ ಅಂತ್ಯವಾಗಿರುವ ಮಾಹಿತಿಯನ್ನೂ ನೀಡಲಾಗಿದೆ.
ಯುಎನ್  ಕಪ್ಪುಪಟ್ಟಿಗೆ ಸೇರ್ಪಡಿಸಿರುವ ಉಗ್ರ ಸಂಘಟನೆ ಜೆಇಎಂ ಮುಖ್ಯಸ್ಥ ಮಸೂದ್ ಅಝರ್ ಪಾಕಿಸ್ತಾನದಲ್ಲಿರುವುದು ಶತಸ್ಸಿದ್ದವಾಗಿರುವ ಸಂಗತಿ. ಇದನ್ನು ಪಾಕ್ ಸಚಿವರೇ ಮಾದ್ಯಮದೆದುರು ಒಪ್ಪಿಕೊಂಡಿದ್ದಾರೆ  ಆದರೂ "ಸಾಕಷ್ಟು ಕ್ರಮಬದ್ಧವಾದ ಮಾಹಿತಿಯ ಕೊರತೆ ಮತ್ತುಬೇಕಾದಷ್ಟು ಸಾಖ್ಯಾಧಾರವಿಲ್ಲ" ಎನ್ನುವ ಮೂಲಕ ಪಾಕಿಸ್ತಾನ ತನ್ನ ನಾಟಕವನ್ನು ಮುಂದುವರಿಸಿದೆ ಎಂದು ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT