ಅರವಿಂದ್ ಕೇಜ್ರಿವಾಲ್ 
ದೇಶ

ತಲಾ 10 ಕೋಟಿ ರು. ಗೆ ಕನಿಷ್ಠ ಏಳು ಆಪ್ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಕೇಜ್ರಿವಾಲ್

ಬಿಜೆಪಿ ಆಮ್ ಆದ್ಮಿ ಪಕ್ಷದ ಏಳಕ್ಕೂ ಹೆಚ್ಚು ಶಾಸಕರನ್ನು ಸಂಪರ್ಕಿಸಿದ್ದು, ಕೇಸರಿ ಪಕ್ಷ ಸೇರಿದರೆ ತಲಾ 10 ಕೋಟಿ ರುಪಾಯಿ ನೀಡುವುದಾಗಿ ಆಮಿಷ ಒಡ್ಡಿದೆ...

ನವದೆಹಲಿ: ಬಿಜೆಪಿ ಆಮ್ ಆದ್ಮಿ ಪಕ್ಷದ ಏಳಕ್ಕೂ ಹೆಚ್ಚು ಶಾಸಕರನ್ನು ಸಂಪರ್ಕಿಸಿದ್ದು, ಕೇಸರಿ ಪಕ್ಷ ಸೇರಿದರೆ ತಲಾ 10 ಕೋಟಿ ರುಪಾಯಿ ನೀಡುವುದಾಗಿ ಆಮಿಷ ಒಡ್ಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಪಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಏಳು ಆಪ್ ಶಾಸಕರು ನನ್ನನ್ನು ಭೇಟಿ ಮಾಡಿದ್ದು, ಬಿಜೆಪಿ ಅವರನ್ನು ಸಂಪರ್ಕಿಸಿ, ತಲಾ 10 ಕೋಟಿ ರುಪಾಯಿ ನೀಡುವುದಾಗಿ ಆಮಿಷ ಒಡ್ಡಿರುವುದಾಗಿ ತಿಳಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಬಿಜೆಪಿಯವರು ನಮ್ಮ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರು ಸೂಟ್ ಆಗುವುದಿಲ್ಲ. ಪ್ರಧಾನಿ ಮೋದಿ ಎರಡು ದಿನಗಳ ಹಿಂದಷ್ಟೇ  40 ಟಿಎಂಸಿ ಶಾಸಕರನ್ನು ಖರೀದಿಸಿ ಮಮತಾ ಬ್ಯಾನರ್ಜಿ ಸರ್ಕಾರ ಬೀಳಿಸುವುದಾಗಿ ಹೇಳಿದ್ದರು ಎಂದರು.
ಕಳೆದ ಸೋಮವಾರ ಪಶ್ಚಿಮ ಬಂಗಾಳದ ಸೆರಾಂಪೊರೆಯಲ್ಲಿ ಬಿಜೆಪಿ ರ್ಯಾಲಿ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, 40 ಟಿಎಂಸಿ ಶಾಸಕರ ನನ್ನ ಸಂಪರ್ಕದಲ್ಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ ಉಳಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?