ಭುವನೇಶ್ವರ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ) 
ದೇಶ

ಫೊನಿ ಆರ್ಭಟ: ಒಡಿಶಾದಲ್ಲಿ 220 ರೈಲುಗಳು ರದ್ದು, ವಿಮಾನ ಸೇವೆ ಸ್ಥಗಿತ

ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಿರುವ ಫೊನಿ ಚಂಡಮಾರುತ ಪರಿಣಾಮದಿಂದಾಗಿ ಒಡಿಶಾದಲ್ಲಿ ಈ ವರೆಗೂ 220ಕ್ಕೂ ಅಧಿಕ ರೈಲುಗಳ ಸೇವೆ ಸ್ಥಗಿತವಾಗಿದ್ದು, ಎಲ್ಲ ರೀತಿಯ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭುವನೇಶ್ವರ: ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಿರುವ ಫೊನಿ ಚಂಡಮಾರುತ ಪರಿಣಾಮದಿಂದಾಗಿ ಒಡಿಶಾದಲ್ಲಿ ಈ ವರೆಗೂ 220ಕ್ಕೂ ಅಧಿಕ ರೈಲುಗಳ ಸೇವೆ ಸ್ಥಗಿತವಾಗಿದ್ದು, ಎಲ್ಲ ರೀತಿಯ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಚಂಡಮಾರುತ ಪ್ರಭಾವದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಯು ಕಳೆದ ಎರಡು ದಿನಗಳಿಂದ ಒಡಿಶಾ, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳದ ಮಾರ್ಗಗಳಲ್ಲಿ ಸಂಚರಿಸುವ 89 ರೈಲುಗಳ ಸಂಚಾರವನ್ನು ರದ್ದುಪಡಿಸಿದೆ. ಹಲವು ರೈಲುಗಳ ಮಾರ್ಗ ಬದಲಿಸಲಾಗಿದ್ದು, ಈ ವರೆಗೂ ಸುಮಾರು 220 ರೈಲುಗಳ ಸಂಚಾರ ಸ್ಥಗಿತವಾಗಿದೆ. ಸಂತ್ರಸ್ತರ ರಕ್ಷಣೆಗೆಂದೇ ಮೂರು ವಿಶೇಷ ರೈಲುಗಳನ್ನುಸೇವೆಗೆ ನಿಯೋಜಿಸಲಾಗಿದ್ದು, ರೈಲಿನಲ್ಲಿ ಎಲ್ಲ ರೀತಿಯ ಸೌಲಭ್ಯಗಳಿರುವಂತೆ ಮುಂಜಾಗ್ರತೆ ವಹಿಸಲಾಗಿದೆ. 
ವಿಮಾನ ಸೇವೆಯಲ್ಲಿ ವ್ಯತ್ಯಯ
ಫೊನಿ ಅಬ್ಬರಕ್ಕೆ ಒಳಗಾಗಿರುವ ಮೂರು ರಾಜ್ಯಗಳ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದ್ದು, ವಾತಾವರಣ ತಿಳಿಗೊಳ್ಳುವವರೆಗೂ ಯಾವುದೇ ರೀತಿಯ ವಿಮಾನ ಹಾರಾಟಕ್ಕೆ ಅನುವು ಮಾಡಿಕೊಡುವುದಿಲ್ಲ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್‌ ಪ್ರಭು ಅವರು ಹೇಳಿದ್ದಾರೆ.
ಅಂತೆಯೇ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ಅಗತ್ಯ ನೆರವು ಒದಗಿಸುವಂತೆ ಎಲ್ಲ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದ್ದು, ಮುಂದಿನ ಆದೇಶದವರೆಗೂ ಕಾಯುವಂತೆ ಸೂಚಿಸಲಾಗಿದೆ.
ಈ ಮಧ್ಯೆ ಇಂಡಿಗೋ ಏರ್ ಲೈನ್ಸ್‌ ಗುರುವಾರ ವಿಶಾಖಪಟ್ಟಣಂ ಮತ್ತು ಭುವನೇಶ್ವರಕ್ಕೆ ಆಗಮಿಸುವ ಹಾಗೂ ಅಲ್ಲಿಂದ ಹೊರಡುವ ತನ್ನ ವಿಮಾನಗಳ ಸೇವೆಯನ್ನು ರದ್ದುಗೊಳಿಸಿದೆ. ಗೋಏರ್‌ ಸಂಸ್ಥೆಯೂ ಶುಕ್ರವಾರ ಇದೇ ರೀತಿ ತನ್ನ ವಿಮಾನಗಳ ಸೇವೆ ರದ್ದುಪಡಿಸುವುದಾಗಿ ಘೋಷಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT