ಬುರ್ಹಾನ್ ಬ್ರಿಗೇಡ್ (ಸಂಗ್ರಹ ಚಿತ್ರ) 
ದೇಶ

ಶೋಪಿಯಾನ್ ಎನ್ ಕೌಂಟರ್; ಹಿಜ್ಬುಲ್ ಕಮಾಂಡರ್ ಲತೀಫ್ ಟೈಗರ್ ಸೇರಿ 3 ಉಗ್ರರು ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ರಗಾಮಿಗಳನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದ್ದು, ಇಂದು ಶೋಪಿಯಾನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಲತೀಫ್ ಟೈಗರ್ ಸಹಿತ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ರಗಾಮಿಗಳನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದ್ದು, ಗುರುವಾರ ಶೋಪಿಯಾನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಲತೀಫ್ ಟೈಗರ್ ಸಹಿತ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಶೋಪಿಯಾನ್ ನ ಇಮಾಮ್ ಸಾಹಿಬ್ ಗ್ರಾಮದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನಾಪಡೆಗಳು ಕೂಡಲೇ ಸ್ಥಳವನ್ನು ಸುತ್ತುವರೆದವು. ಈ ವೇಳೆ ಮನೆಯೊಂದರಲ್ಲಿ ಅಡಗಿಕುಳಿತ್ತಿದ್ದ ಉಗ್ರರು ಏಕಾಏಕಿ ಗುಂಡಿನ ಸುರಿಮಳೆ ಗರೆದರು. ಇದೇ ಸಂದರ್ಭದಲ್ಲಿ ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಮೂವರು ಉಗ್ರಗಾಮಿಗಳು ಹತರಾಗಿದ್ದಾರೆ. ಮೃತ ಉಗ್ರರಲ್ಲಿ ಓರ್ವ ಉಗ್ರ ಹಿಜ್ಬುಲ್ ಕಮಾಂಡರ್ ಲತೀಫ್ ಟೈಗರ್ ಎಂದು ಗುರುತಿಸಲಾಗಿದ್ದು, ಈತ ಉಗ್ರ ಬುರ್ಹಾನ್ ವಾನಿ ಆಪ್ತ. ಮತ್ತು ಈತ ಆವಂತಿಪೋರ ನಿವಾಸಿ ಎಂದು ತಿಳಿದುಬಂದಿದೆ.
ಇನ್ನು ಇಬ್ಬರು ಉಗ್ರ ಕುರಿತು ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.
ಇಡೀ ಬುರ್ಹಾನ್ ಬ್ರಿಗೇಡ್ ನಾಶ
ಇನ್ನು ಬುರ್ಹಾನ್ ವಾನಿ ಹತ್ಯೆ ಬಳಿಕ ಸೃಷ್ಟಿಯಾಗಿದ್ದ 12 ಸದಸ್ಯರ ಬುರ್ಹಾನ್ ಬ್ರಿಗೇಡ್ ಇದೀಗ ಸಂಪೂರ್ಣ ನಾಶವಾಗಿದ್ದು, ಇಂದು ಹತ್ಯೆಯಾದ ಲತೀಫ್ ಟೈಗರ್ ಸಂಘಟನೆಯ 12 ಸದಸ್ಯನಂತೆ. ಈ ಹಿಂದೆ ಬುರ್ಹಾನ್ ಬ್ರಿಗೇಡ್ ನ 10 ಮಂದಿ ಉಗ್ರರನ್ನು ಸೇನೆ ವಿವಿಧ ಕಾರ್ಯಾಚರಣೆಗಳಲ್ಲಿ ಹೊಡೆದುರುಳಿಸಿತ್ತು. 2016ರಲ್ಲಿ ಉಗ್ರ ತಾರಿಖ್ ಪಂಡಿತ್ ಬಂಧನಕ್ಕೀಡಾಗಿದ್ದ.
ಇಮಾಮ್ ಸಾಹಿಬ್ ಗ್ರಾಮದ ಸುತ್ತಮುತ್ತ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಲಾಗಿದ್ದು, ಎನ್ ಕೌಂಟರ್ ನಲ್ಲಿ ಓರ್ವ ಯೋಧನಿಗೂ ಕೂಡ ಗಾಯವಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT