ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ ಫೋನಿ ಚಂಡಮಾರುತ 
ದೇಶ

ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ ಫೋನಿ ಚಂಡಮಾರುತ, ಭಾರಿ ಮಳೆ, ಧರೆಗುರುಳಿದ ಮರಗಳು!

ನಿರೀಕ್ಷೆಯಂತೆಯೇ ಇಂದು ಮುಂಜಾನೆ ಪಶ್ಚಿಮ ಬಂಗಾಳಕ್ಕೆ ಫೋನಿ ಚಂಡಮಾರುತ ಅಪ್ಪಳಿಸಿದ್ದು, ಭಾರಿ ಗಾಳಿ ಸಹಿತ ಮಳೆಯಾಗುತ್ತಿದ್ದು, ಹಲವಾರು ಮರಗಳು ಧರೆಗುರುಳಿವೆ ಎಂದು ತಿಳಿದುಬಂದಿದೆ.

ಕೋಲ್ಕತಾ: ನಿರೀಕ್ಷೆಯಂತೆಯೇ ಇಂದು ಮುಂಜಾನೆ ಪಶ್ಚಿಮ ಬಂಗಾಳಕ್ಕೆ ಫೋನಿ ಚಂಡಮಾರುತ ಅಪ್ಪಳಿಸಿದ್ದು, ಭಾರಿ ಗಾಳಿ ಸಹಿತ ಮಳೆಯಾಗುತ್ತಿದ್ದು, ಹಲವಾರು ಮರಗಳು ಧರೆಗುರುಳಿವೆ ಎಂದು ತಿಳಿದುಬಂದಿದೆ.

ನಿನ್ನೆ ಬೆಳಗ್ಗೆ ಪ್ರತೀ ಗಂಟೆಗೆ 200 ಕಿ ಮೀ ವೇಗದಲ್ಲಿ ಸಾಗಿದ್ದ ಫೋನಿ ಚಂಡಮಾರುತ ಒಡಿಶಾದ ಪುರಿ ಕಡಲ ತೀರವನ್ನು ಅಪ್ಪಳಿಸಿತ್ತು. ಕಡಲ ತೀರಕ್ಕೆ ಒಪ್ಪಳಿಸಿದ ಚಂಡಮಾರುತದ ವೇಗ ಪ್ರತೀ ಗಂಟೆಗೆ 245 ಕಿ.ಮೀ ಇತ್ತು. ಆದರೆ ಪಶ್ಚಿಮ ಬಂಗಾಳದಲ್ಲಿ ಚಂಡಮಾರುತದ ವೇಗ ಕಡಿಮೆಯಾಗಿದ್ದು,  ಪ್ರತೀ ಗಂಟೆಗೆ ಚಂಡಮಾರುತ 70-80 ವೇಗದಲ್ಲಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚಂಡಮಾರುತದ ವೇಗ ಕಡಿಮೆಯಾದರೂ ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ್ ನಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಪಶ್ಚಿಮ ಮಿಡ್ನಾಪುರದಿಂದ ಸುಮಾರು 15 ಸಾವಿರಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರ ಮಾಡಲಾಗಿದ್ದು, ಶುಕ್ರವಾರ ರಾತ್ರಿಯಿಂದಲೇ ಇವರನ್ನು ಗಂಜಿ ಕೇಂದ್ರಗಳಲ್ಲಿ ಇಟ್ಟು ರಕ್ಷಣೆ ಮಾಡಲಾಗಿದೆ. ಮಿಡ್ನಾಪುರ್ ನಲ್ಲಿ ಪ್ರಸ್ತುತ 20 ಸಾವಿರಕ್ಕೂ ಅಧಿಕ ಮಂದಿ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ರಾತ್ರಿ 12.30ರಲ್ಲಿ ಒಡಿಶಾದ ಬಾಲಾಸೋರ್ ಪ್ರವೇಶ ಮಾಡಿದ್ದ ಫೋನಿ ಚಂಡಮಾರುತ ಇಂದು ಮುಂಜಾನೆ ಪಶ್ಚಿಮ ಬಂಗಾಳಕ್ಕೆ ಪ್ರವೇಶ ಮಾಡಿದೆ. ಬಳಿಕ ಮಧ್ಯಾಹ್ನದ ಹೊತ್ತಿಗೆ ಚಂಡಮಾರುತ ಈಶಾನ್ಯ ಭಾಗದತ್ತ ಮುಖಮಾಡಿ ಬರ್ದ್ವಾನ್-ಹೂಗ್ಲಿ  ಗಡಿ ಮೂಲಕ ನಾಡಿಯಾ ದಿಂದ ಬಾಂಗ್ಲಾದೇಶ ಪ್ರವೇಶ ಮಾಡಲಿದೆ. ಅಷ್ಟು ಹೊತ್ತಿಗಾಗಲೇ ಚಂಡಮಾರುತದ ವೇಗ ಮತ್ತಷ್ಟು ಕ್ಷೀಣಿಸಿರುತ್ತದೆ. ಆದರೂ ಭಾರಿ ಮಳೆ ಸಂಭವವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಿನ್ನೆ ಒಡಿಶಾದ ಪುರಿ ಕಡಲ ತೀರಕ್ಕೆ ಅಪ್ಪಳಿಸಿದ್ದ ಫೋನಿ ಚಂಡಮಾರುತ ಭಾರಿ ಅವಾಂತರ ಸೃಷ್ಟಿ ಮಾಡಿತ್ತು. ಅಲ್ಲದೆ ಚಂಡಮಾರುತ ಮತ್ತು ಇತರೆ ಮಳೆ ಸಂಬಂಧಿತ ಅವಘಡಗಳಲ್ಲಿ 8 ಮಂದಿ ಸಾವಿಗೀಡಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT