ಸಂಜಯ್ ರಾವತ್ ಮತ್ತು ಸೀತಾರಾಮ ಯೆಚೂರಿ 
ದೇಶ

ನಿಮ್ಮ ಹೆಸರನ್ನು ಬಾಬರ್ ಅಥವಾ ಅಕ್ಬರ್ ಎಂದು ಬದಲಿಸಿಕೊಳ್ಳಿ: ಸೀತಾರಾಮ ಯೆಚೂರಿಗೆ ಸಂಜಯ್ ರಾವತ್ ತಿರುಗೇಟು

ಹಿಂದೂ ಧರ್ಮದಲ್ಲಿ ಹಿಂಸಾಚಾರವಿದೆ ಎಂದು ಹೇಳಿದ್ದ ಸಿಪಿಐ(ಐಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ತಮ್ಮ ಹೆಸರನ್ನು ಬಾಬರ್ ಅಥವಾ ಅಪ್ಜಲ್ ಎಂದು ...

ಮುಂಬಯಿ: ಹಿಂದೂ ಧರ್ಮದಲ್ಲಿ ಹಿಂಸಾಚಾರವಿದೆ ಎಂದು ಹೇಳಿದ್ದ ಸಿಪಿಐ(ಐಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ತಮ್ಮ ಹೆಸರನ್ನು ಬಾಬರ್ ಅಥವಾ ಅಪ್ಜಲ್ ಎಂದು ಬದಲಿಸಿಕೊಳ್ಳಲಿ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಆಗ್ರಹಿಸಿದ್ದಾರೆ.
ಹಿಂದೂ ಧರ್ಮ ಗ್ರಂಥಗಳಾದ ರಾಮಾಯಣ ಹಾಗೂ ಮಹಾಭಾರತದಲ್ಲಿ  ಹಿಂಸಾಚಾರದ ಘಟನೆಗಳೇ ತುಂಬಿವೆ ಎಂದು ಸಿಪಿಐ -ಎಂ ನಾಯಕ ಸೀತಾರಾಂ ಯೆಚೂರಿ  ಟೀಕಿಸಿದ್ದರು.
ರಾಮಾಯಣ ಮತ್ತು ಮಹಾಭಾರತ ಮಹಾಗ್ರಂಥಗಳನ್ನು ಗೌರವಿಸದಿದ್ದರೇ ಸೀತಾರಾಯ ಯೆಚೂರಿ, ತಮ್ಮ ಹೆಸರನ್ನು ಬಾಬರ್, ಅಪ್ಝಲ್ ಖಾನ್  ಅಥವಾ ಔರಂಗ್ ಜೇಬ್ ಅಥವಾ ಚೆಂಗಿಸ್ ಖಾನ್ ಎಂದು ಹೆಸರು ಬದಲಿಸಿಕೊಳ್ಳಲಿ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಹಲವು ರಾಜರು ಹಾಗೂ ಸಂಸ್ಥಾನಗಳು ಹೋರಾಟ ನಡೆಸಿದ್ದಾರೆ. ರಾಮಾಯಣ ಹಾಗೂ ಮಹಾಭಾರತದಲ್ಲೂ ಕೂಡಾ ತೀವ್ರ ಹಿಂಸಾಚಾರವೇ ತುಂಬಿವೆ. ಆದರೂ ಪ್ರಚಾರಕರು ಹಿಂದೂಗಳಿಗೆ ಹಿಂಸಾಚಾರದಲ್ಲಿ ನಂಬಿಕೆ ಇಲ್ಲ ಎನ್ನುತ್ತಾರೆ. ಇದರ ಹಿಂದಿನ ಸಿದ್ಧಾಂತ ಏನು ?  ಹಿಂಸಾಚಾರ ತುಂಬಿರುವ ಧರ್ಮದಲ್ಲಿ ನಾವು ನಾವು ಹಿಂದೂಗಳೆ ಇಲ್ಲ ಎಂದಿದ್ದರು.
ಬಿಜೆಪಿ ಎಲ್ಲಾ ರಂಗದಲ್ಲೂ ವಿಫಲವಾಗಿದೆ ಎಂದು ಆರೋಪಿಸಿರುವ ಸೀತಾರಾಂ ಯೆಚೂರಿ, ಸಾಂವಿಧಾನಿಕ ಸಂಸ್ಥೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಮೂಲಕ ಜನರ ಪ್ರಜಾಸತಾತ್ಮಕ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT