ನರೇಂದ್ರ ಮೋದಿ 
ದೇಶ

ನನ್ನ ತಂದೆಯನ್ನು ಎಳೆದು ತಂದು ಉಳಿಯಲಾರಿರಿ, ನಿಮ್ಮ ಕರ್ಮ ನಿಮಗಾಗಿ ಕಾಯುತ್ತಿದೆ: ರಾಹುಲ್ ತಿರುಗೇಟು

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಬದುಕು ಭ್ರಷ್ಟಾಚಾರಿ ನಂಬರ್1 ಎಂಬ ಹಣೆ ಪಟ್ಟಿಯೊಂದಿಗೆ ಅಂತ್ಯವಾಗಿತ್ತು ಎಂಬ ಪ್ರಧಾನಿ ನರೇಂದ್ರ ಮೋದಿ ...

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಬದುಕು ಭ್ರಷ್ಟಾಚಾರಿ ನಂಬರ್1 ಎಂಬ ಹಣೆ ಪಟ್ಟಿಯೊಂದಿಗೆ ಅಂತ್ಯವಾಗಿತ್ತು ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.
ನಿಮ್ಮ ಕರ್ಮ ನಿಮಗಾಗಿ ಕಾಯುತ್ತಿದೆ, ನನ್ನ ತಂದೆಯನ್ನು ಎಳೆದು ತಂದು ನೀವು ಉಳಿಯಲಾರಿರಿ,, ನಮ್ಮ ತಂದೆ ನಿಮ್ಮನ್ನು ರಕ್ಷಿಸಲಾರರು, ನಿಮಗೆ ನನ್ನ ಅಪಾರ ಪ್ರೀತಿ ಮತ್ತು ದೊಡ್ಡ ಅಪ್ಪುಗೆ ಎಂದು ರಾಹುಲ್  ಗಾಂಧಿ ಟ್ವೀಟ್ ಮಾಡಿದ್ದಾರೆ. 
ರಾಹುಲ್ ಗಾಂಧಿ ಅವರೇ 1980 ರಲ್ಲಿ ಪ್ರಧಾನಿಯಾಗಿದ್ದ  ಕಾಲದಲ್ಲಿ ಬೋಪೋರ್ಸ್ ಹಗರಣ ನಡೆದಿತ್ತು, ಸೈನ್ಯಕ್ಕೆ ರಕ್ಷಣಾ ಸಾಮಾಗ್ರಿಗಳನ್ನು ಪೂರೈಸುವ ಸ್ವೀಡೀಶ್ ಮೂಲದ ಬೋಪೋರ್ಸ್ ಕಂಪನಿಯಿಂದ ರಾಜೀವ್ ಗಾಂಧಿ  ದೊಡ್ಡ ಮೊತ್ತದ ಹಣವನ್ನು ಕಮಿಷನ್ ರೂಪದಲ್ಲಿ ಪಡೆದಿದ್ದರು.  ಈ ಮೂಲಕ ನಂಬರ್ 1 ಭ್ರಷ್ಟಾಚಾರಿ ಎಂಬ ಹಣೆ ಪಟ್ಟಿಯೊಂದಿಗೆ ಅವರ ಬದುಕು ಅಂತ್ಯವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ರ್ಯಾಲಿಯೊಂದರಲ್ಲಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT