ಸುನಿಲ್ ಅರೊರ 
ದೇಶ

ರಂಜಾನ್ ಉಪವಾಸ: ಮತದಾನದ ಸಮಯ ಬದಲಾವಣೆ ಅಸಾಧ್ಯವೆಂದ ಚುನಾವಣಾ ಆಯೋಗ

ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮತದಾನ ಸಮಯವನ್ನು ಬದಲಿಸಬೇಕು ಎಂಬ ಬೇಡಿಕೆಯನ್ನು ಭಾರತ ಚುನಾವಣಾ ಆಯೋಗ ತಿರಸ್ಕರಿಸಿದೆ.

ನವದೆಹಲಿ: ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮತದಾನ ಸಮಯವನ್ನು ಬದಲಿಸಬೇಕು ಎಂಬ ಬೇಡಿಕೆಯನ್ನು ಭಾರತ ಚುನಾವಣಾ ಆಯೋಗ ತಿರಸ್ಕರಿಸಿದೆ. 
ಲೋಕಸಭಾ ಚುನಾವಣೆಯಲ್ಲಿ 5ನೇ ಹಂತದ ಮತದಾನ ಸೋಮವಾರ  ಏಳು ರಾಜ್ಯಗಳಲ್ಲಿ 51 ಕ್ಷೇತ್ರಗಳಲ್ಲಿ ನಡೆಯಲಿದೆ.ಇದಕ್ಕಾಗಿ ಎಲ್ಲಾ ಸಿದ್ದತೆಗಳಾಗಿದೆ.
 2019 ರ ಸಾರ್ವತ್ರಿಕ ಚುನಾವಣೆಗಳ 5, ,6 ಹಾಗೂ 7 ನೇ ಹಂತದ ಮತದಾನದ ಸಮಯ ಬದಲಾಯಿಸಬೇಕು. ಎಂದರೆ ಬೆಳಿಗ್ಗೆ ಏಳರ ಬದಲಿಗೆ ಐದು ಗಂಟೆಯಿಂದ ಮತದಾನಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ ನಲ್ಲಿ ಮನವಿ ಸಲ್ಲಿಸಲಾಗಿತ್ತು. ಮೇ 2ರಂದು ಕೋರ್ಟ್ ಆಯೋಗವು ಚುನಾವಣೆ ಮತದಾನದ ಸಮಯ ಬದಲಾವಣೆಗೆ ಅವಕಾಶ ಮಾಡಿಕೊಡುವ ಬಗೆಗೆ ನಿರ್ಧರಿಸಬೇಕು ಎಂದು ಹೇಳಿತ್ತು.
ಮೊಹಮ್ಮದ್ ನಿಜಾಮುದ್ದೀನ್ ಪಾಶಾ ಎಂಬ ವಕೀಲರು ಈ ಅರ್ಜಿ ಸಲ್ಲಿಸಿದ್ದರು.
ಇದೀಗ ಚುನಾವಣಾ ಆಯೋಗ ಉಳಿದ ಮೂರೂ ಹಂತಗಳಲ್ಲಿ ಮತದಾನದ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT