ಸುಪ್ರೀಂ ಕೋರ್ಟ್ 
ದೇಶ

ಇಬ್ಬರು ಎಐಎಡಿಎಂಕೆ ಶಾಸಕರ ಅನರ್ಹತೆಗೆ ಸುಪ್ರೀಂ ಕೋರ್ಟ್‌ ತಡೆ

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಆರೋಪದ ಮೇಲೆ ತಮಿಳುನಾಡು ವಿಧಾನಸಭೆ ಸ್ಪೀಕರ್‌ ಅವರಿಂದ ಅನರ್ಹತೆ ನೊಟೀಸ್‌ ಪಡೆದಿದ್ದ ಇಬ್ಬರು ಎಐಎಡಿಎಂಕೆ...

ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಆರೋಪದ ಮೇಲೆ ತಮಿಳುನಾಡು  ವಿಧಾನಸಭೆ ಸ್ಪೀಕರ್‌ ಅವರಿಂದ ಅನರ್ಹತೆ ನೊಟೀಸ್‌ ಪಡೆದಿದ್ದ ಇಬ್ಬರು ಎಐಎಡಿಎಂಕೆ ಶಾಸಕರ ಅನರ್ಹತೆ ಕ್ರಮಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆಯಾಜ್ಞೆ ನೀಡಿದೆ.
ಅನರ್ಹತೆ ಪ್ರಶ್ನಿಸಿ ಎಐಎಡಿಎಂಕೆ ಶಾಸಕರಾದ ವಿ ಟಿ ಕಲೈಸೆಲ್ವನ್‌ ಮತ್ತು ಇ ರತ್ನಸಭಾಪತಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು, ಅನರ್ಹತೆ ಕ್ರಮಕ್ಕೆ ತಡೆ ನೀಡಿದ್ದಾರೆ.
ಎಎಂಎಂಕೆ ನಾಯಕ ಟಿಟಿವಿ ದಿನಕರನ್ ಜತೆ ಗುರುತಿಸಿಕೊಂಡಿದ್ದ ಶಾಸಕರಾದ ಎ ಪ್ರಭು ಕಲೈಸೆಲ್ವನ್‌ ಮತ್ತು ಇ ರತ್ನಸಭಾಪತಿ ಅವರಿಗೆ ಕಳೆದ ಏಪ್ರಿಲ್ 30ರಂದು ಪಕ್ಷಾಂತರ ನಿಷೇಧ ಕಾನೂನಿನಡಿ ಸ್ಪೀಕರ್‌ ಪಿ ಧನಪಾಲ್ ಅವರು ಅನರ್ಹತೆ ನೊಟೀಸ್‌ ಜಾರಿಮಾಡಿದ್ದರು. ಮೂವರು ಶಾಸಕರ ಪೈಕಿ ಇಬ್ಬರು ಶಾಸಕರು ಸ್ಪೀಕರ್ ನೋಟಿಸ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT