ಸಂಗ್ರಹ ಚಿತ್ರ 
ದೇಶ

ಸಿಜೆಐ ವಿರುದ್ಧ ಲೈಂಗಿಕ ದೌರ್ಜನ್ಯ ದೂರಿನ ಹಿಂದೆ ಕಾಣದ ಶಕ್ತಿಗಳ ಕೈವಾಡ: ಬಿಸಿಐ ಶಂಕೆ!

ಮುಖ್ಯ ನ್ಯಾಯಮೂರ್ತಿ ರಂಜನ್ ಗಗೊಯ್ ಅವರ ವಿರುದ್ದ ದಾಖಲಾಗಿರುವ ಲೈಂಗಿಕ ದೌರ್ಜನ್ಯ ದೂರಿನ ಹಿಂದೆ ಕಾಣದ ಶಕ್ತಿಗಳ ಕೈವಾಡ ಇದೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಬಲವಾದ ಶಂಕೆ ವ್ಯಕ್ತಪಡಿಸಿದೆ.

ನವದೆಹಲಿ: ಮುಖ್ಯ ನ್ಯಾಯಮೂರ್ತಿ ರಂಜನ್ ಗಗೊಯ್ ಅವರ ವಿರುದ್ದ ದಾಖಲಾಗಿರುವ ಲೈಂಗಿಕ ದೌರ್ಜನ್ಯ ದೂರಿನ ಹಿಂದೆ ಕಾಣದ ಶಕ್ತಿಗಳ ಕೈವಾಡ ಇದೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಬಲವಾದ ಶಂಕೆ ವ್ಯಕ್ತಪಡಿಸಿದೆ.
ಈ ಬಗ್ಗೆ ಇಂದು ಹೇಳಿಕೆ ಬಿಡುಗಡೆ ಮಾಡಿರುವ ಬಿಸಿಐ (ಬಾರ್ ಕೌನ್ಸಿಲ್ ಆಫ್ ಇಂಡಿಯಾ) ( ಭಾರತೀಯ ವಕೀಲರ ಪರಿಷತ್ತು)'ಸುಪ್ರೀಂ ಕೋರ್ಟ್ ನ ಮಾಜಿ ಮಹಿಳಾ ಉದ್ಯೋಗಿ ಮಾಡಿದ್ದ ಲೈಂಗಿಕ ಕಿರುಕುಳ ಆರೋಪದಲ್ಲಿ  “ಯಾವುದೂದುರುದ್ದೇಶ” ಇರುವಂತೆ ಕಂಡು ಬುರುತ್ತಿದೆ ಎಂದು ಅಭಿಪ್ರಾಯ ಪಟ್ಟಿದೆ.
'ದೇಶದ ಸಾಮನ್ಯ ಜನರು ಮೂರ್ಖರಲ್ಲ, ಮುಖ್ಯ ನ್ಯಾಯಮೂರ್ತಿಗಳ ವಿರುದ್ದ ದೂರಿನ ಹಿಂದೆ ಬಲವಾದ ಶಕ್ತಿಗಳಿವೆ ಎಂಬುದನ್ನು ಆರ್ಥಮಾಡಿಕೊಳ್ಳುತ್ತಾರೆ. ದೂರು ನೀಡಿರುವ ವ್ಯಕ್ತಿ ಸಾಮಾನ್ಯ ಮಹಿಳೆಯಲ್ಲ ಎಂದು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
'ಸಿಜೆಐ ವಿರುದ್ಧ ನೀಡಿರುವ ದೂರುಗಳನ್ನು ಮತ್ತು ಹೊರಿಸಿರುವ ಆರೋಪಗಳನ್ನು ಕೂಲಂಕುಷವಾಗಿ ಪರಿಶೀಲಿಸಿದರೆ, ಖಂಡಿತಾ ಅನುಮಾನ ಮೂಡುತ್ತದೆ. ದೂರು ನೀಡಿರುವ ಮಹಿಳೆ ಸಿಜೆಐ ತನ್ನ ಮೇಲೆ ಮಾಡಿರುವ ಲೈಂಗಿಕ ದೌರ್ಜನ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿರುವುದಾಗಿ ಹೇಳಿದ್ದಾರೆ. ಆದರೆ ಈ ಬಗ್ಗೆ ಪೊಲೀಸರು ಆಧಾರ ಕೇಳಿದಾಗ ಅದಕ್ಕೆ ಸೂಕ್ತ ರೀತಿಯಲ್ಲಿ ಉತ್ತರಿಸಿಲ್ಲ. ಈ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಖಂಡಿತಾ ದೂರಿನ ಕುರಿತು ಅನುಮಾನ ಮಾಡುತ್ತದೆ. ಯಾವುದೇ ರೀತಿಯ ಎಫ್ ಐಆರ್ ದಾಖಲಿಸದೇ ನೇರವಾಗಿ ಸುಪ್ರೀಂ ಕೋರ್ಟ್ ನಲ್ಲೇ ಮಹಿಳೆ ಅರ್ಜಿ ದಾಖಲಿಸಿದ್ದಾರೆ. ಇಂದು ಖಂಡಿತಾ ಅನುಮಾನ ಮೂಡಿಸುತ್ತದೆ ಎಂದು ಹೇಳಿದ್ದಾರೆ.
ಅಂತೆಯೇ ಸಿಜೆಐ ವಿರುದ್ಧ ಪ್ರಕರಣವನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ತೀರ್ಪಿಗೂ ಬೆಂಬಲ ನೀಡಿರುವ ಬಿಸಿಐ, ತ್ರಿಸದಸ್ಯ ಪೀಠದ ತೀರ್ಪಿನ ಬಗ್ಗೆ ಯಾವುದೇ ರೀತಿಯ ಅನುಮಾನ ಬೇಡ. ತೀರ್ಪು ಸರಿಯಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ