ನರೇಂದ್ರ ಮೋದಿ-ಪ್ರಿಯಾಂಕಾ ವಾದ್ರಾ 
ದೇಶ

ಪ್ರಧಾನಿ ನರೇಂದ್ರ ಮೋದಿ ದುರ್ಯೋಧನ: ಪ್ರಿಯಾಂಕಾ ವಾದ್ರಾ

ಪ್ರಧಾನಿ ನರೇಂದ್ರ ಮೋದಿ ಅವರನ್ನು ದುರ್ಯೋಧನ ಎಂದು ಪ್ರಿಯಾಂಕಾ ವಾದ್ರಾ ಕರೆದಿರುವುದು ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ದುರ್ಯೋಧನ ಎಂದು ಪ್ರಿಯಾಂಕಾ ವಾದ್ರಾ ಕರೆದಿರುವುದು ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.
ಹರಿಯಾಣದಲ್ಲಿ ಇಂದು ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ವಾದ್ರಾ ಪ್ರಧಾನಿ ಮೋದಿ ಮಹಾಭಾರತದ ದುರ್ಯೋಧನನಂತೆ ಅಕ್ರಮಣಕಾರಿ. ಇದೇ ಕಾರಣಕ್ಕೆ ಅವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲು ಕಾಣುತ್ತಾರೆ ಎಂದು ಪ್ರಿಯಾಂಕಾ ಗಾಂಧಿ ಹರಿಹಾಯ್ದಿದ್ದರು. ತಮ್ಮ ತಂದೆ ರಾಜೀವ್ ಗಾಂಧಿ ಅವರನ್ನು ನಂಬರ್ 1 ಭ್ರಷ್ಟಾಚಾರಿ ಎಂದು ಪ್ರಧಾನಿ ಮೋದಿ ಕರೆದಿದ್ದನ್ನೂ ಪ್ರಿಯಾಂಕಾ ಖಂಡಿಸಿದರು.
ಪ್ರಿಯಾಂಕಾ ವಾದ್ರಾ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಬಾರಿ ಲೋಕಸಭೆ ಚುನಾವಣೆಯ ಫಲಿತಾಂಶವೇ ಪ್ರಿಯಾಂಕಾರಿಗೆ ತಕ್ಕ ಪಾಠ ಕಲಿಸುತ್ತದೆ. ಈ ತರದ ಹೇಳಿಕೆಗಳೆಲ್ಲಾ ಕಾಂಗ್ರೆಸ್ ನ ಹತಾಷೆಯ ಮನೋಭಾವವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT