ನರೇಂದ್ರ ಮೋದಿ, ತೇಜ್ ಬಹದ್ದೂರ್ ಯಾದವ್
ನವದೆಹಲಿ: 50 ಕೋಟಿ ರುಪಾಯಿಯನ್ನು ಕೊಟ್ಟರೆ ಪ್ರಧಾನ ಸೇವಕ ಎಂದುಕೊಂಡಿರುವ ಮೋದಿಯನ್ನು ಕೊಲ್ಲುತ್ತೇನೆ ಎಂದು ವಾರಣಾಸಿಯ ಎಸ್ಪಿ ಅಭ್ಯರ್ಥಿ ಹಾಗೂ ಮಾಜಿ ಯೋಧ ತೇಜ್ ಬಹದ್ದೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಕುರಿತ ವಿಡಿಯೋ ಇದೀಗ ವೈರಲ್ ಆಗಿದೆ.
ಈ ಹೇಳಿಕೆ ಕುರಿತು ಇದೀಗ ಬಿಜೆಪಿ ಆತಂಕ ವ್ಯಕ್ತಪಡಿಸಿದೆ. ಆದರೆ ವಿಡಿಯೋದಲ್ಲಿ ಸ್ಪಷ್ಟತೆ ಇಲ್ಲ ಮತ್ತು ಇದರಲ್ಲಿನ ವ್ಯಕ್ತಿ ತೇಜ್ ಬಹದ್ದೂರ್ ಹೌದೋ, ಅಲ್ಲವೋ ಎಂಬುದು ಸ್ಪಷ್ಟವಾಗಿಲ್ಲ.
ಸೇನೆಯಿಂದ ಅಮಾನತುಗೊಂಡಿರುವ ತೇಜ್ ಬಹದ್ದೂರ್ ಪ್ರಧಾನಿ ಮೋದಿ ವಿರುದ್ಧವಾಗಿ ವಾರಣಾಸಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸೆಣಸುತ್ತಿದ್ದರು. ಆದರೆ ಲೋಪದೋಷ ಹಿನ್ನೆಲೆಯಲ್ಲಿ ತೇಜ್ ಬಹದ್ದೂರ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿತ್ತು.
ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ ತೇಜ್ ಬಹದ್ದೂರ್ ಸುಪ್ರೀಂಕೋರ್ಟ್ ಗೆ ದೂರು ಸಲ್ಲಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos