ಸುಪ್ರೀಂ ಕೋರ್ಟ್ ಆವರಣದಲ್ಲಿ ಮಹಿಳಾ ವಕೀಲರ ಪ್ರತಿಭಟನೆ 
ದೇಶ

ಲೈಂಗಿಕ ಕಿರುಕುಳ ಪ್ರಕರಣ: ಸಿಜೆಐಗೆ ಕ್ಲೀನ್ ಚಿಟ್ ವಿರೋಧಿಸಿ ಮಹಿಳಾ ವಕೀಲರಿಂದ ಪ್ರತಿಭಟನೆ

ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರಿಗೆ ತ್ರಿಸದಸ್ಯ ಪೀಠ ಕ್ಲೀನ್ ಚಿಟ್ ನೀಡಿದ್ದನ್ನು ವಿರೋಧಿಸಿ ದೆಹಲಿಯಲ್ಲಿ ಮಹಿಳಾ ವಕೀಲರು ಬೃಹತ್ ಪ್ರತಿಭಟನೆ ನೀಡಿದ್ದಾರೆ.

ನವದೆಹಲಿ: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರಿಗೆ ತ್ರಿಸದಸ್ಯ ಪೀಠ ಕ್ಲೀನ್ ಚಿಟ್ ನೀಡಿದ್ದನ್ನು ವಿರೋಧಿಸಿ ದೆಹಲಿಯಲ್ಲಿ ಮಹಿಳಾ ವಕೀಲರು ಬೃಹತ್ ಪ್ರತಿಭಟನೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ಅವರಣದಲ್ಲಿ ಮಾಜಿ ಸುಪ್ರೀಂ ಕೋರ್ಟ್ ಮಹಿಳಾ ವಕೀಲರ ನೇತೃತ್ವದಲ್ಲಿ ಮಹಿಳಾ ವಕೀಲರು ಪ್ರತಿಭಟನೆ ನಡೆಸುತ್ತಿದ್ದು, ತ್ರಿಸದಸ್ಯ ಪೀಠದ ತೀರ್ಪಿನ ಮೂಲಕ ಸರ್ವೋಚ್ಛ ನ್ಯಾಯಾಲಯದಲ್ಲಿ ಮಹಿಳೆಗೆ ನ್ಯಾಯ ದೊರೆಯುತ್ತದೆ ಎಂಬ ನಮ್ಮ ವಿಶ್ವಾಸ ನಾಶವಾಗಿದೆ ಎಂದು ಮಹಿಳಾ ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಪ್ರಸ್ತುತ ಸುಪ್ರೀಂ ಕೋರ್ಟ್ ಆವರಣದಲ್ಲಿ ಮಹಿಳಾ ವಕೀಲರ ಪ್ರತಿಭಟನೆಯಿಂದಾಗಿ ಪರಿಸ್ಥಿತಿ ಕೊಂಚ ವಿಕೋಪಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದಾರೆ. ಅಂತೆಯೇ ಸ್ಥಳದಲ್ಲಿ ಸೆಕ್ಷನ್ 144 ಜಾರಿ ಮಾಡಿದ್ದಾರೆ. 
ಇನ್ನು ನಿನ್ನೆಯಷ್ಚೇ  ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದತೆ ಸುಪ್ರೀಂ ಕೋರ್ಟ್ ಆಂತರಿಕ ವಿಚಾರಣಾ ಸಮಿತಿ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದು, ಆರೋಪ ಆಧಾರ ರಹಿತ ಎಂದು ವರದಿ ನೀಡಿತ್ತು. ಮಹಿಳೆ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತ್ರಿಸದಸ್ಯ ಪೀಠ ರದ್ದುಗೊಳಿಸಿತ್ತು. ಆ ಮೂಲಕ ಕಳೆದ 14 ದಿನಗಳಿಂದ ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದಿದ್ದ ಬೃಹತ್ ಪ್ರಹಸನಕ್ಕೆ ತ್ರಿಸದಸ್ಯ ಪೀಠ ತೆರೆ ಎಳೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT