ಸುಪ್ರೀಂ ಕೋರ್ಟ್ ಆವರಣದಲ್ಲಿ ಮಹಿಳಾ ವಕೀಲರ ಪ್ರತಿಭಟನೆ 
ದೇಶ

ಲೈಂಗಿಕ ಕಿರುಕುಳ ಪ್ರಕರಣ: ಸಿಜೆಐಗೆ ಕ್ಲೀನ್ ಚಿಟ್ ವಿರೋಧಿಸಿ ಮಹಿಳಾ ವಕೀಲರಿಂದ ಪ್ರತಿಭಟನೆ

ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರಿಗೆ ತ್ರಿಸದಸ್ಯ ಪೀಠ ಕ್ಲೀನ್ ಚಿಟ್ ನೀಡಿದ್ದನ್ನು ವಿರೋಧಿಸಿ ದೆಹಲಿಯಲ್ಲಿ ಮಹಿಳಾ ವಕೀಲರು ಬೃಹತ್ ಪ್ರತಿಭಟನೆ ನೀಡಿದ್ದಾರೆ.

ನವದೆಹಲಿ: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರಿಗೆ ತ್ರಿಸದಸ್ಯ ಪೀಠ ಕ್ಲೀನ್ ಚಿಟ್ ನೀಡಿದ್ದನ್ನು ವಿರೋಧಿಸಿ ದೆಹಲಿಯಲ್ಲಿ ಮಹಿಳಾ ವಕೀಲರು ಬೃಹತ್ ಪ್ರತಿಭಟನೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ಅವರಣದಲ್ಲಿ ಮಾಜಿ ಸುಪ್ರೀಂ ಕೋರ್ಟ್ ಮಹಿಳಾ ವಕೀಲರ ನೇತೃತ್ವದಲ್ಲಿ ಮಹಿಳಾ ವಕೀಲರು ಪ್ರತಿಭಟನೆ ನಡೆಸುತ್ತಿದ್ದು, ತ್ರಿಸದಸ್ಯ ಪೀಠದ ತೀರ್ಪಿನ ಮೂಲಕ ಸರ್ವೋಚ್ಛ ನ್ಯಾಯಾಲಯದಲ್ಲಿ ಮಹಿಳೆಗೆ ನ್ಯಾಯ ದೊರೆಯುತ್ತದೆ ಎಂಬ ನಮ್ಮ ವಿಶ್ವಾಸ ನಾಶವಾಗಿದೆ ಎಂದು ಮಹಿಳಾ ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಪ್ರಸ್ತುತ ಸುಪ್ರೀಂ ಕೋರ್ಟ್ ಆವರಣದಲ್ಲಿ ಮಹಿಳಾ ವಕೀಲರ ಪ್ರತಿಭಟನೆಯಿಂದಾಗಿ ಪರಿಸ್ಥಿತಿ ಕೊಂಚ ವಿಕೋಪಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದಾರೆ. ಅಂತೆಯೇ ಸ್ಥಳದಲ್ಲಿ ಸೆಕ್ಷನ್ 144 ಜಾರಿ ಮಾಡಿದ್ದಾರೆ. 
ಇನ್ನು ನಿನ್ನೆಯಷ್ಚೇ  ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದತೆ ಸುಪ್ರೀಂ ಕೋರ್ಟ್ ಆಂತರಿಕ ವಿಚಾರಣಾ ಸಮಿತಿ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದು, ಆರೋಪ ಆಧಾರ ರಹಿತ ಎಂದು ವರದಿ ನೀಡಿತ್ತು. ಮಹಿಳೆ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತ್ರಿಸದಸ್ಯ ಪೀಠ ರದ್ದುಗೊಳಿಸಿತ್ತು. ಆ ಮೂಲಕ ಕಳೆದ 14 ದಿನಗಳಿಂದ ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದಿದ್ದ ಬೃಹತ್ ಪ್ರಹಸನಕ್ಕೆ ತ್ರಿಸದಸ್ಯ ಪೀಠ ತೆರೆ ಎಳೆದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT