ಸಾಂದರ್ಭಿಕ ಚಿತ್ರ 
ದೇಶ

ಸಿಜೆಐಗೆ ಕ್ವೀನ್ ಚಿಟ್; 'ನನ್ನ ಸಂದೇಹ ನಿಜವಾಯ್ತು, ನಂಬಿಕೆ ನುಚ್ಚುನೂರಾಯ್ತು'; ದೂರುದಾರ ಮಹಿಳೆ

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರಿಗೆ ಕ್ಲೀನ್ ಚಿಟ್ ನೀಡಿ ತ್ರಿಸದಸ್ಯ ಪೀಠದ ತೀರ್ಪಿನ ಕುರಿತು ದೂರುದಾರ ಮಹಿಳೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರಿಗೆ ಕ್ಲೀನ್ ಚಿಟ್ ನೀಡಿ ತ್ರಿಸದಸ್ಯ ಪೀಠದ ತೀರ್ಪಿನ ಕುರಿತು ದೂರುದಾರ ಮಹಿಳೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಹಿಳೆ, 'ಇಂದು ನನ್ನ ಸಂದೇಹ ನಿಜವಾಗಿದೆ. ದೇಶದ ಅತ್ಯುನ್ನತ ನ್ಯಾಯಾಲಯವು ನನಗೆ ನ್ಯಾಯ ನೀಡುತ್ತದೆ ಎಂಬ ನನ್ನ ನಂಬಿಕೆಯು ನುಚ್ಚುನೂರಾಗಿದೆ ಎಂದು ಹೇಳಿದ್ದಾರೆ.
ಅಂತೆಯೇ ಆಂತರಿಕ ಸಮಿತಿಯ ವರದಿಗೆ ಪ್ರತಿಕ್ರಿಯೆ ನೀಡಿರುವ 35 ವರ್ಷ ವಯಸ್ಸಿನ ಮಹಿಳೆ, 'ತ್ರಿಸದಸ್ಯ ಪೀಠ ತೀರ್ಪಿನಿಂದಾಗಿ ನನಗೆ ಅತ್ಯಂತ ನಿರಾಸೆ ಹಾಗೂ ಬೇಸರವಾಗಿದೆ. ಮಹಿಳೆಯಾಗಿರುವ ಕಾರಣಕ್ಕೆ ನನಗೆ ಅನ್ಯಾಯ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಎಲ್ಲ ರೀತಿಯ ಸಾಕ್ಷ್ಯಾಧಾರಗಳನ್ನೂ ನ್ಯಾಯಮೂರ್ತಿ ಬೋಬ್ಡೆ ಅವರ ನೇತೃತ್ವದ ತ್ರಿಸದಸ್ಯ ನ್ಯಾಯಪೀಟಕ್ಕೆ ನೀಡಿದ್ದೆ ಎಂದು ಹೇಳಿದ್ದಾರೆ.
ಅಂತೆಯೇ ನ್ಯಾಯಪೀಠದ ವಿರುದ್ಧವೂ ಕಿಡಿಕಾರಿರುವ ಮಹಿಳೆ, ಕನಿಷ್ಠ ಪಕ್ಷ ತೀರ್ಪಿನ ಪ್ರತಿಯನ್ನೂ ನ್ಯಾಯಪೀಠ ದೂರುದಾರಳಾದ ನನಗೆ ನೀಡಿಲ್ಲ. ನನ್ನ ಬಗ್ಗೆ ನ್ಯಾಯಪೀಠಕ್ಕೆ ಇರುವ ಭಾವನೆ ಇದರಿಂದಲೇ ತಿಳಿಯುತ್ತದೆ. ಆದರೂ ನಾನು ಎದೆಗುಂದುವುದಿಲ್ಲ. ನನ್ನ ವಕೀಲರನ್ನು ಭೇಟಿ ಮಾಡಿ ಬಗ್ಗೆ ಚರ್ಚಿಸಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ಧರಿಸುತ್ತೇನೆ ಎಂದು ಮಹಿಳೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT