ಸಂಗ್ರಹ ಚಿತ್ರ 
ದೇಶ

ಇಂಡೋ-ಪಾಕ್ ಗಡಿಯಲ್ಲಿ ಭಾರತಕ್ಕೆ 'ಭೀಷ್ಮ' ಬಲ; ಗಡಿಯುದ್ದಕ್ಕೂ 464 ಭೀಷ್ಮ ಟ್ಯಾಂಕರ್​ ಗಳ ನಿಯೋಜನೆ?

ಮಹತ್ವದ ಬೆಳವಣಿಗೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ರಷ್ಯಾ ನಿರ್ಮಿತ ಪ್ರಬಲ ಟಿ-90 ಭೀಷ್ಮ ಯುದ್ಧ ಟ್ಯಾಂಕರ್ ಗಳನ್ನು ನಿಯೋಜಿಸಲು ಭಾರತೀಯ ಸೇನೆ ಮುಂದಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ರಷ್ಯಾ ನಿರ್ಮಿತ ಪ್ರಬಲ ಟಿ-90 ಭೀಷ್ಮ ಯುದ್ಧ ಟ್ಯಾಂಕರ್ ಗಳನ್ನು ನಿಯೋಜಿಸಲು ಭಾರತೀಯ ಸೇನೆ ಮುಂದಾಗಿದೆ ಎಂದು ತಿಳಿದುಬಂದಿದೆ.
ಮಾಧ್ಯಮವೊಂದರ ವರದಿಯಂತೆ, ಭಾರತೀಯ ಸೇನೆ ಸುಮಾರು 13 ಸಾವಿರ ಕೋಟಿ ರೂ ವೆಚ್ಚದಲ್ಲಿ ರಷ್ಯಾ ನಿರ್ಮಿತ ಪ್ರಬಲ ಟಿ-90 ಭೀಷ್ಮ ಯುದ್ಧ ಟ್ಯಾಂಕರ್ ಗಳನ್ನು ನಿರ್ಮಿಸಿ ಅವುಗಳನ್ನು ಇಂಡೋ-ಪಾಕ್ ಗಡಿಯಲ್ಲಿ ನಿಯೋಜನೆ ಮಾಡಲು ಮುಂದಾಗಿದೆ ಎಂದು ಹೇಳಲಾಗಿದೆ.
ರಷ್ಯಾ ನಿರ್ಮಿತ ಟಿ-90 ಟ್ಯಾಂಕರ್ ಗಳನ್ನು ಭಾರತದಲ್ಲಿ ನಿರ್ಮಾಣ ಮಾಡಲು ಭಾರತ ಸರ್ಕಾರ ಇತ್ತೀಚೆಗಷ್ಟೇ ರಷ್ಯಾ ಸರ್ಕಾರದಿಂದ ಪರವಾನಿಗೆ ಪಡೆದುಕೊಂಡಿತ್ತು. ಇದರ ಬೆನ್ನಲ್ಲೇ ಇದೀಗ ಭಾರತ ಮತ್ತು ಪಾಕಿಸ್ತಾನದ ಗಡಿಯುದ್ದಕ್ಕೂ ಈ ಟಿ90 ಭೀಷ್ಮ ಟ್ಯಾಂಕರ್ ಗಳನ್ನು ನಿಯೋಜಿಸಲು ಭಾರತೀಯ ಸೇನೆ ಉದ್ದೇಶಿಸಿದೆ. ಮೂಲಗಳ ಪ್ರಕಾರ ಗಡಿಯಲ್ಲಿ ಸುಮಾರು 464 ಟ್ಯಾಂಕರ್ ಗಳನ್ನು ನಿಯೋಜಿಸಲು ಸೇನೆ ಮುಂದಾಗಿದೆ. ಒಂದು ಅಂದಾಜಿನ ಪ್ರಕಾರ ಭಾರತೀಯ ಸೇನೆಯ ಈ ಪ್ರಕ್ರಿಯೆಗೆ ಸುಮಾರು 13 ಸಾವಿರ ಕೋಟಿ ರೂ ವೆಚ್ಚವಾಗಲಿದೆ ಎಂದು ಹೇಳಲಾಗುತ್ತಿದೆ.
ಇನ್ನು ಟಿ-90 ಟ್ಯಾಂಕರ್ ನಿರ್ಮಾಣಕ್ಕೆ ರಷ್ಯಾದಿಂದ ಕಳೆದ ತಿಂಗಳಷ್ಟೇ ಭಾರತ ಪರವಾನಿಗೆ ಪಡೆದುಕೊಂಡಿತ್ತು. ಅದರಂತೆ ಚೆನ್ನೈನ ಆವಡಿಯಲ್ಲಿರುವ ಸೇನೆಗೆ ಸೇರಿದ ಹೆಚ್ ​ವಿಎಫ್ ಫ್ಯಾಕ್ಟರಿಯಲ್ಲಿ ಈ ಟಿ-90 ಟ್ಯಾಂಕರ್ ಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಲಾಗಿದೆ. 2001ರಲ್ಲಿ ಭಾರತ ಸರ್ಕಾರ 100ಕ್ಕೂ ಹೆಚ್ಚು ಟಿ-90 ಯುದ್ಧ ಟ್ಯಾಂಕರ್ ​ಗಳನ್ನು ರಷ್ಯಾದಿಂದ ಖರೀದಿಸಿತ್ತು. ಇದೀಗ ಮತ್ತಷ್ಟು ಟ್ಯಾಂಕರ್ ​ಗಳನ್ನು ಚೆನ್ನೈ ಘಟಕದಲ್ಲಿ ಉತ್ಪಾದಿಸಿ, ಬಳಿಕ ಅವುಗಳನ್ನು ಇಂಡೋ-ಪಾಕ್ ಗಡಿಯಲ್ಲಿ ನಿಯೋಜನೆ ಮಾಡಲು ಮುಂದಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT