ವಾಯುದಾಳಿ ನಡೆದ ಬಾಲಾಕೋಟ್ ಪಕ್ಕದ ಜಾಬಾ 
ದೇಶ

ಬಾಲಾಕೋಟ್ ವಾಯು ದಾಳಿಯಲ್ಲಿ 170 ಉಗ್ರರು ಹತರಾಗಿದ್ದಾರೆ: ಇಟಲಿ ಪತ್ರಕರ್ತೆ

ಭಾರತೀಯ ವಾಯು ಪಡೆ ಪಾಕಿಸ್ಥಾನದ ಬಾಲಾಕೋಟ್‌ ನಲ್ಲಿನ ಜೈಶ್‌ ಉಗ್ರ ತರಬೇತಿ ಕಟ್ಟಡದ ಮೇಲೆ ನಡೆಸಿದ್ದ ಬಾಂಬ್‌ ದಾಳಿಯಲ್ಲಿ ಸುಮಾರು 170ರಷ್ಟು ಉಗ್ರರು ...

ನವದೆಹಲಿ: ಭಾರತೀಯ ವಾಯು ಪಡೆ ಪಾಕಿಸ್ಥಾನದ ಬಾಲಾಕೋಟ್‌ ನಲ್ಲಿನ ಜೈಶ್‌ ಉಗ್ರ ತರಬೇತಿ ಕಟ್ಟಡದ ಮೇಲೆ ನಡೆಸಿದ್ದ ಬಾಂಬ್‌ ದಾಳಿಯಲ್ಲಿ ಸುಮಾರು 170ರಷ್ಟು  ಉಗ್ರರು ಹತರಾಗಿದ್ದರೆ ಎಂಬುದನ್ನು ಇಟಲಿ ಪತ್ರಕರ್ತೆ ಫ್ರಾನ್ಸೆಸ್ಕಾ ಮ್ಯಾರಿನೋ ಇದೀಗ ತಡವಾಗಿ ಬಹಿರಂಗಪಡಿಸಿದ್ದಾರೆ.
ಈ ವಿಷಯವನ್ನು ಬಾಲಾಕೋಟ್‌ ದಾಳಿ ನಡೆದ ತತ್‌ಕ್ಷಣದಲ್ಲೇ ವರದಿ ಮಾಡಿರುತ್ತಿದ್ದರೆ ಪಾಕಿಸ್ಥಾನದಲ್ಲಿನ ತನ್ನ ಸುದ್ದಿ ಮೂಲಗಳಿಗೆ ಅಪಾಯ ಒದಗುವುದು ಖಚಿತವಿತ್ತು; ಅದಕ್ಕಾಗಿ ತಾನು ಈ ವಿಷಯವನ್ನು ತಡವಾಗಿ ವರದಿ ಮಾಡುವುದು ಅನಿವಾರ್ಯವಾಯಿತು ಫ್ರಾನ್ಸೆಸ್ಕಾ ಮ್ಯಾರಿನೋ ಹೇಳಿದ್ದಾರೆ.
ಭಾರತೀಯ ವಾಯು ಪಡೆಯ ಬಾಂಬ್‌ ದಾಳಿಯಲ್ಲಿ ಮೃತಪಟ್ಟಿದ್ದ  ಜೈಶ್‌ ಉಗ್ರರ ಮನೆಯವರು ಮತ್ತು ಕುಟುಂಬದವರಿಗೆ ಅಪಾರ ಜೀವ ಹಾನಿಯಾಗಿರುವ ಬಗ್ಗೆ ಬಾಯಿ ಮುಚ್ಚಿಕೊಂಡು ಸುಮ್ಮನಿರಲು ಪ್ರಧಾನಿ ಇಮ್ರಾನ್‌ ಖಾನ್‌ ಸರಕಾರ ಲಂಚ ನೀಡಿ ಜೀವ ಬೆದರಿಕೆ ಒಡ್ಡಿದ್ದರಿಂದ ಉಗ್ರರು ಹತರಾದ ವಿಷಯ ಬಹಿರಂಗಕ್ಕೆ ಬರಲೇ ಇಲ್ಲ ಎಂದು ಹೇಳಿದ್ದಾರೆ.
ಬಾಲಾಕೋಟ್‌ ಮೇಲಿನ ಐಎಎಫ್ ವಾಯು ದಾಳಿಯಲ್ಲಿ 130ರಿಂದ 170 ಜೈಶ್‌ ಉಗ್ರರು ಹತರಾದರೂ ಅದನ್ನು ಅಂತಾರಾಷ್ಟ್ರೀಯ ಸಮುದಾಯಕ್ಕೆ ಗೊತ್ತಾಗದ ರೀತಿಯಲ್ಲಿ  ಮುಚ್ಚಿಡುವ ಸರ್ವ ಪ್ರಯತ್ನವನ್ನು ಇಮ್ರಾನ್‌ ಖಾನ್‌ ಸರಕಾರ ಮಾಡಿತು ಎಂದು ಹೇಳಿದರು.
ಐಎಎಫ್ ವಾಯು ದಾಳಿಯಲ್ಲಿ ಗಾಯಗೊಂಡ ಅನೇಕ ಜೈಶ್‌ ಉಗ್ರರು ಈಗಲೂ ಪಾಕ್‌ ಮಿಲಿಟರಿ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರನ್ನು ಯಾವ ಆಸ್ಪತ್ರೆಗೂ ಸೇರಿಸಲಾಗಿಲ್ಲ ಎಂದು ಮ್ಯಾರಿನೋ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT