ಎಲ್ ರಾಮದಾಸ್ 
ದೇಶ

ರಾಜೀವ್ ಕುಟುಂಬ ಐಎನ್‌ಎಸ್ ವಿರಾಟ್ ದುರ್ಬಳಕೆ ಮಾಡಿಕೊಂಡಿಲ್ಲ, ಪ್ರಧಾನಿ ಮೋದಿ ಹೇಳಿಕೆ ತಪ್ಪು: ನೌಕಾಪಡೆ ಮಾಜಿ ಮುಖ್ಯಸ್ಥ

ರಾಜೀವ್ ಗಾಂಧಿ ಅಧಿಕಾರದಲ್ಲಿದ್ದಾಗ ಯುದ್ದನೌಕೆ ಐಎನ್ ಎಸ್ ವಿರಾಟ್ ಅನ್ನು ತಮ್ಮ ರಜಾ ದಿನಗಳನ್ನು ಕಳೆಯಲು ಪರ್ಸನಲ್ ಟ್ಯಾಕ್ಸಿಯಂತೆ...

ನವದೆಹಲಿ: ರಾಜೀವ್ ಗಾಂಧಿ ಅಧಿಕಾರದಲ್ಲಿದ್ದಾಗ ಯುದ್ದನೌಕೆ ಐಎನ್ ಎಸ್ ವಿರಾಟ್ ಅನ್ನು ತಮ್ಮ ರಜಾ ದಿನಗಳನ್ನು ಕಳೆಯಲು ಪರ್ಸನಲ್ ಟ್ಯಾಕ್ಸಿಯಂತೆ ಬಳಸಿಕೊಳ್ಳುತ್ತಿದ್ದರು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ಎಲ್ ರಾಮದಾಸ್ ಅವರು, ಪ್ರಧಾನಿ ಹೇಳಿಕೆ ತಪ್ಪು ಎಂದಿದ್ದಾರೆ.
ಸಾಗರ ಗಡಿಯ ರಕ್ಷಣೆಗಾಗಿ ನಿಯೋಜಿಸಲಾಗಿದ್ದ ಐಎನ್‌ಎಸ್ ವಿರಾಟ್ ನೌಕೆಯನ್ನು ರಾಜೀವ್ ಗಾಂಧಿ ಅವರ ಕುಟುಂಬ ರಜೆಯ ಮೋಜು ಅನುಭವಿಸಲು ಲಕ್ಷದ್ವೀಪಕ್ಕೆ ತೆರಳಲು 'ಕುಟುಂಬದ ಖಾಸಗಿ ಟ್ಯಾಕ್ಸಿ'ಯಂತೆ ಬಳಸಲಾಗಿತ್ತು. ಹತ್ತು ದಿನ ಈ ನೌಕೆ ಅಲ್ಲಿಯೇ ಇತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆರೋಪಿಸಿದ್ದರು.
ಈ ಕುರಿತು ಪ್ರಕಟಣೆ ನೀಡಿರುವ, ಯುದ್ಧನೌಕೆ ಐಎನ್‌ಎಸ್ ವಿರಾಟ್ ಮಾಜಿ ಕಮಾಂಡಿಂಗ್ ಆಫೀಸರ್ ರಾಮದಾಸ್ ಅವರು, ಯುದ್ಧ ನೌಕೆಯನ್ನು ದುರ್ಬಳಕೆ ಮಾಡಿಕೊಂಡಿರಲಿಲ್ಲ. 32 ವರ್ಷಗಳ ಹಿಂದೆ ರಾಜೀವ್ ಗಾಂಧಿ ಮತ್ತು ಅವರ ಪತ್ನಿ ಸೋನಿಯಾ ಗಾಂಧಿ ಐಎನ್‌ಎಸ್ ವಿರಾಟ್‌ನಲ್ಲಿ ಏರಿದ್ದು ನಿಜ. ಆದರೆ ಅದು ರಜೆಯ ಮೋಜಿಗಾಗಿ ಅಲ್ಲ. ಅವರು ಲಕ್ಷದ್ವೀಪ ಅಭಿವೃದ್ಧಿ ಪ್ರಾಧಿಕಾರದ ಸಭೆಗಾಗಿ, ಅಧಿಕೃತ ಕೆಲಸದ ನಿಮಿತ್ತ ಹೊರಟಿದ್ದರು. ಬಂಗಾರಾಮ್ ದ್ವೀಪದಲ್ಲಿ ಸಭೆ ನಡೆಸಲು ರಾಜೀವ್ ಹೊರಟಿದ್ದರು. ಕಚೇರಿ ಕೆಲಸಗಳಿಗೆ ತೆರಳುವಾಗ ಪತ್ನಿಯೊಂದಿಗೆ ಪ್ರಯಾಣಿಸಲು ಪ್ರಧಾನಿಗೆ ಅಧಿಕಾರವಿರುತ್ತದೆ. ಆದರೆ, ಅವರು ಅಲ್ಲಿಗೆ ಹೆಲಿಕಾಪ್ಟರ್‌ನಲ್ಲಿ ತೆರಳಿದ್ದರು. ಅವರ ಸುರಕ್ಷತೆಗಾಗಿ ನೌಕಾಪಡೆಯ ಕೆಲವು ಸಿಬ್ಬಂದಿ ದ್ವೀಪಕ್ಕೆ ಮೊದಲೇ ತೆರಳಿದ್ದರು ಎಂದು ಹೇಳಿದ್ದಾರೆ.
ಇನ್ನು ಈ ಅವಧಿಯಲ್ಲಿ ಐಎನ್‌ಎಸ್ ವಿರಾಟ್‌ನ ಕಮಾಂಡಿಂಗ್ ಆಫೀಸರ್ ಆಗಿದ್ದ ನಿವೃತ್ತ ವೈಸ್ ಅಡ್ಮಿರಲ್ ವಿನೋದ್ ಪಸ್ರಿಚಾ ಅವರು ಸಹ ರಾಜೀವ್ ಕುಟುಂಬವು ದ್ವೀಪಕ್ಕೆ ತೆರಳಲು ನೌಕೆಯನ್ನು ಬಳಸಿಕೊಂಡಿದೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT