ಎಚ್ ಎಸ್ ಫೂಲ್ಕಾ 
ದೇಶ

1984ರಲ್ಲಿ ಸಿಖ್ ರನ್ನು ಸಾಯಿಸುವಂತೆ ಪ್ರಧಾನಿ ಕಚೇರಿಯೇ ನಿರ್ದೇಶನ ನೀಡಿತ್ತು: ಎಚ್ಎಸ್ ಫೂಲ್ಕಾ

ದೆಹಲಿಯಲ್ಲಿ 1984ರಲ್ಲಿ ನಡೆದ ಸಿಖ್‌ ವಿರೋಧಿ ಗಲಭೆ ವೇಳೆ ಸಿಖ್ ರನ್ನು ಸಾಯಿಸುವಂತೆ ಪ್ರಧಾನ ಮಂತ್ರಿಗಳ ಕಚೇರಿಯೇ ನೇರವಾಗಿ ನಿರ್ದೇಶನ ನೀಡಿತ್ತು...

ನವದೆಹಲಿ: ದೆಹಲಿಯಲ್ಲಿ 1984ರಲ್ಲಿ ನಡೆದ ಸಿಖ್‌ ವಿರೋಧಿ ಗಲಭೆ ವೇಳೆ ಸಿಖ್ ರನ್ನು ಸಾಯಿಸುವಂತೆ ಪ್ರಧಾನ ಮಂತ್ರಿಗಳ ಕಚೇರಿಯೇ ನೇರವಾಗಿ ನಿರ್ದೇಶನ ನೀಡಿತ್ತು ಎಂದು ಹಿರಿಯ ವಕೀಲ ಹಾಗೂ ಸಿಖ್‌ ವಿರೋಧಿ ಗಲಭೆ ಸಂತ್ರಸ್ತರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸುತ್ತಿರುವ ಎಚ್ ಎಸ್ ಫೂಲ್ಕಾ ಅವರು ಆರೋಪಿಸಿದ್ದಾರೆ.
1984ರಲ್ಲಿ ಪ್ರಧಾನಿ ಕಚೇರಿಯ ಸೂಚನೆಯಂತೆ ಹಲವು ಸಿಖ್ ರನ್ನು ಹತ್ಯೆ ಮಾಡಿದ ಬಗ್ಗೆ ಸಾಕಷ್ಟು ಸಾಕ್ಷ್ಯಗಳು ಇವೆ. ಆ ಸಾಕ್ಷ್ಯಗಳನ್ನು ನಾವು ನಾನಾವತಿ ಆಯೋಗ ಮತ್ತು ಮಿಶ್ರಾ ಆಯೋಗಕ್ಕೆ ನೀಡಿದ್ದೇವೆ ಎಂದು ಫೂಲ್ಕಾ ಎಎನ್ಐಗೆ ತಿಳಿಸಿದ್ದಾರೆ.
ಸಿಖ್ ಗಲಭೆ ವೇಳೆ ಸೇನೆಯನ್ನು ಹಿಂಪಡೆದಿರಲಿಲ್ಲ. ಹೀಗಾಗಿ ಅಂದು ಗೃಹ ಸಚಿವ ನರಸಿಂಹ ರಾವ್ ಅವರ ಮನೆಗೆ ತೆರಳಿ, ಸೇನೆ ಅಮಾಯಕ ಜನರನ್ನು ಹತ್ಯೆ ಮಾಡುತ್ತಿದ್ದು, ಕೂಡಲೇ ಸೇನೆಯನ್ನು ಹಿಂಪಡೆಯುವಂತೆ ಮನವಿ ಮಾಡಿದ್ದೆ. ಇದಕ್ಕೆ ಅವರು ಒಪ್ಪಿದ್ದರು ಎಂದು ಫೂಲ್ಕಾ ವಿವರಿಸಿದ್ದಾರೆ.
ಅಂದು ರಾಷ್ಟ್ರಪತಿಗಳು, ಕೇಂದ್ರ ಕಾನೂನು ಸಚಿವರಾಗಿದ್ದ ಶಾಂತಿ ಭೂಷಣ್ ಹಾಗೂ ಗೃಹ ಸಚಿವ ನರಸಿಂಹ ರಾವ್ ಅವರು ಸೇನೆ ಹಿಂಪಡೆಯಲು ಬಯಸಿದ್ದರು. ಆದರೆ ಪ್ರಧಾನಿ ಕಚೇರಿ ಮಾತ್ರ ಇದಕ್ಕೆ ಒಪ್ಪಲಿಲ್ಲ. ಈ ಕುರಿತು ನಾವು ಆಯೋಗಕ್ಕೆ ಸಾಕ್ಷ್ಯಗಳನ್ನು ನೀಡಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT