ಬದರೀನಾಥ್ ದೇವಾಲಯ 
ದೇಶ

ಚಳಿಗಾಲದ ವಿರಾಮದ ನಂತರ ಮತ್ತೆ ಬಾಗಿಲು ತೆರೆದ ಬದರೀನಾಥ್ ದೇವಾಲಯ

ಚಳಿಗಾಲದ ವಿರಾಮದ ನಂತರ ಪ್ರಸಿದ್ಧ ಪುಣ್ಯ ಕ್ಷೇತ್ರ ಬದ್ರಿನಾಥ್ ದೇವಾಲಯದ ಬಾಗಿಲನ್ನು ಭಕ್ತಾಧಿಗಳಿಗಾಗಿ ಇಂದು ಮುಂಜಾನೆಯಿಂದ ಮತ್ತೆ ತೆರೆಯಲಾಗಿದೆ.

ಉತ್ತರ್ ಖಂಡ್ :ಚಳಿಗಾಲದ ವಿರಾಮದ ನಂತರ ಪ್ರಸಿದ್ಧ ಪುಣ್ಯ ಕ್ಷೇತ್ರ ಬದ್ರಿನಾಥ್ ದೇವಾಲಯದ ಬಾಗಿಲನ್ನು ಭಕ್ತಾಧಿಗಳಿಗಾಗಿ ಇಂದು ಮುಂಜಾನೆಯಿಂದ ಮತ್ತೆ ತೆರೆಯಲಾಗಿದೆ.

ಉತ್ತರ ಖಂಡ್ ರಾಜ್ಯದ ಛಾಮೊಲಿ ಜಿಲ್ಲೆಯಲ್ಲಿರುವ ಬದರೀನಾಥ್ , ಹಿಂದೂಗಳ ಪವಿತ್ರ ಪಟ್ಟಣವಾಗಿದೆ. ಭಾರತದ ನಾಲ್ಕು ಛಾರ್ ಧಾಮ ತೀರ್ಥಯಾತ್ರೆಯ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ಉಳ್ಳದಾಗಿದೆ.

 ಹಿಮಾಲಯದ ತಪ್ಪಲಿನ ದೇವಾಲಯದ ಬಾಗಿಲನ್ನು  ಬೆಳಗ್ಗೆ 4-15 ರ ಸುಮಾರಿನಲ್ಲಿ ಅಸಂಖ್ಯಾತ ಭಕ್ತಾಧಿಗಳು, ದೇವಾಲಯದ ಸಮಿತಿ ಹಾಗೂ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ಪ್ರಧಾನ ಆರ್ಚಕ ಈಶ್ವರಿ ಪ್ರಸಾದ್ ನಾಂಬುದಿರಿ ತೆಗೆದರು.

ದೇವಾಲಯದ ಬಾಗಿಲು ತೆರೆಯುತ್ತಿದ್ದಂತೆ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು,  ಬಾಗಿಲು ತೆರೆದ ಮೊದಲ ದಿನವೇ ಸುಮಾರು 10 ಸಾವಿರ ಭಕ್ತಾಧಿಗಳು ಭೇಟಿ ನೀಡಿದ್ದಾರೆ ಎಂದು ದೇವಾಲಯದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT