ಸುರೇಶ್ 
ದೇಶ

ಯಾಕೆ ಹೊಡೆದೆ ಅಂತ ಗೊತ್ತಿಲ್ಲ, ಆದ್ರೆ ಪಶ್ಚಾತ್ತಾಪವಾಗುತ್ತಿದೆ: ಕೇಜ್ರಿವಾಲ್ ಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ

ಮೇ 4ರಂದು ರೋಡ್ ಶೋ ನಡೆಸುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಯಾಕೆ ಕಪಾಳಮೋಕ್ಷ ಮಾಡಿದೆ...

ನವದೆಹಲಿ: ಮೇ 4ರಂದು ರೋಡ್ ಶೋ ನಡೆಸುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಯಾಕೆ ಕಪಾಳಮೋಕ್ಷ ಮಾಡಿದೆ ಎಂದು ನನಗೆ ಗೊತ್ತಾಗುತ್ತಿಲ್ಲ. ಆದರೆ ನನಗೆ ನಿಜಕ್ಕೂ ಪಶ್ಚಾತಾಪವಾಗುತ್ತಿದೆ ಎಂದು ಸಿಎಂ ಮೇಲೆ ಕೈಮಾಡಿದ ವ್ಯಕ್ತಿ ಸುರೇಶ್ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರ ಮೇಲೆ ನಾನು ಯಾಕೆ ಕೈಮಾಡಿದೆ ಅಂತ ಗೊತ್ತಿಲ್ಲ. ಆ ಬಗ್ಗೆ ನಾನು ವಿಷಾದಿಸುತ್ತೇನೆ ಎಂದು ಸುರೇಶ್ ಎಎನ್ಐಗೆ ತಿಳಿಸಿದ್ದಾರೆ.
ಇದೇ ವೇಳೆ, ತಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ ಎಂದಿರುವ ಸುರೇಶ್, ತನಗೆ ಹೀಗೆ ಮಾಡು ಎಂದು ಯಾರು ಕೂಡ ಹೇಳಿಲ್ಲ. ಪೊಲೀಸರು ಸಹ ದುರ್ವರ್ತನೆ ತೋರಿಲ್ಲ. ನಾನು ಮಾಡಿದ್ದು ತಪ್ಪೆಂದು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಮೇ 4ರಂದು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಯ ಮೋತಿನಗರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ಕೇಜ್ರಿವಾಲ್ ಅವರ ಕಾರನ್ನು ಹತ್ತಿದ 33 ವರ್ಷದ ಸುರೇಶ್ ಸಿಎಂಗೆ ಕಪಾಳಮೋಕ್ಷ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ತಕ್ಷಣ ಕೇಜ್ರಿವಾಲ್ ಅವರ ರಕ್ಷಣೆಗೆ ಧಾವಿಸಿದ ಬೆಂಬಲಿಗರು, ಯುವಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದರು.
ಸಿಎಂ ಕೇಜ್ರಿವಾಲ್‌ ಮೇಲೆ ನಡೆದಿರುವ ಹಲ್ಲೆ ಪ್ರತಿಪಕ್ಷ ಪ್ರಾಯೋಜಿತ ಎಂದು ಆಪ್‌ ಆರೋಪಿಸಿತ್ತು. ಸಿಎಂ ಭದ್ರತೆ ವಿಚಾರದಲ್ಲಿ ನಡೆದ ಮತ್ತೊಂದು ಲೋಪದ ನಿದರ್ಶನ ಇದಾಗಿದೆ. ಜತೆಗೆ ಹೇಡಿತನದ ಕೃತ್ಯವಾಗಿದ್ದು, ದೆಹಲಿಯಲ್ಲಿ ಆಪ್‌ ಜನಪ್ರಿಯತೆಯನ್ನು ತಡೆಯುವ ಹುನ್ನಾರ ಎಂದು ಟ್ವೀಟ್‌ ಮಾಡಿತ್ತು.
ಪ್ರಸ್ತುತ ದೆಹಲಿ ಸಿಎಂ ಕೇಜ್ರಿವಾಲ್‌ಗೆ ಝಡ್‌ ಪ್ಲಸ್‌ ಭದ್ರತೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT