ರಾಹುಲ್ ಗಾಂಧಿ, ಪ್ರಧಾನಿ ಮೋದಿ 
ದೇಶ

ಒತ್ತಡದಲ್ಲಿ ಪ್ರಧಾನಿ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ರಾಹುಲ್

ಪ್ರಧಾನಿ ನರೇಂದ್ರ ಮೋದಿ ಒತ್ತಡದಲ್ಲಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ನಂಬರ್ 1 ಭ್ರಷ್ಟಾಚಾರಿ ಆಗಿಯೇ ಮೃತಪಟ್ಟರು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ ದಿನದಿಂದಲೂ ನಿರಂತರವಾಗಿ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮೋದಿ ಒತ್ತಡದಲ್ಲಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಇತ್ತೀಚಿಗೆ ನೀಡಿರುವ ಹೇಳಿಕೆ ಲೋಕಸಭಾ ಚುನಾವಣೆ ಫಲಿತಾಂಶದ  ಬಗ್ಗೆ ಹತಾಶೆಗೊಳ್ಳುತ್ತಿರುವುದನ್ನು ಪ್ರತಿಬಿಂಬಿಸುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

'ಡಿಯರ್ ಮೋದಿ ಇತ್ತೀಚಿಗೆ ಸಂದರ್ಶನ ಹಾಗೂ ವಿಡಿಯೋಗಳಲ್ಲಿ ನೀಡಿರುವ ಹೇಳಿಕೆ ಒತ್ತಡದಲ್ಲಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದೀರಿ, ಫಲಿತಾಂಶದ ಬಗ್ಗೆ ಹತಾಶರಾಗಿದ್ದೀರಿ ಎಂದು ರಾಹುಲ್ ಗಾಂಧಿ ಟ್ವೀಟ್ ನಲ್ಲಿ ಹೇಳಿದ್ದಾರೆ.
ಕೆಲ ವಾರಗಳಿಂದಲೂ ನೆಹರು ಕುಟುಂಬದ ಮೇಲೆ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ. ರಾಜೀವ್ ಗಾಂಧಿ ಕುಟುಂಬ ಯುದ್ಧ ನೌಕೆ ಐಎನ್ ಎಸ್ ವಿರಾಟ್ ನ್ನು ವೈಯಕ್ತಿಕ ಟ್ಯಾಕ್ಸಿಯಾಗಿ ಮಾಡಿಕೊಂಡಿದ್ದರು ಎಂದು ಬುಧವಾರ ಮೋದಿ ಆರೋಪಿಸಿದ್ದರು. ಆದಾಗ್ಯೂ, ಈ ಆರೋಪವನ್ನು  ಐಎನ್ ಎಸ್ ವಿರಾಟ್ ಮಾಜಿ ಕಮಾಂಡಿಂಗ್ ಆಫೀಸರ್ ತಳ್ಳಿಹಾಕಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಮೋದಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

Ebola outbreak: ಮಾರಣಾಂತಿಕ ಎಬೋಲಾಗೆ 131 ಸಾವು, 500ಕ್ಕೂ ಹೆಚ್ಚು ಶಂಕಿತ ಕೇಸ್; ವಿಶ್ವಸಂಸ್ಥೆಯಿಂದ ತುರ್ತು ಪರಿಸ್ಥಿತಿ ಘೋಷಣೆ!

ದೇವಾಲಯಗಳ ಚಿನ್ನದ ಮೇಲೆ ಪ್ರಧಾನಿ ಮೋದಿ ಕಣ್ಣು?: ಕೇಂದ್ರ ಸರ್ಕಾರ ಹೇಳಿದ್ದೇನು?

ಆತ್ಮಹತ್ಯೆ ವದಂತಿ ಬೆನ್ನಲ್ಲೇ ಜೈಲಿಗೆ ತೆರಳಿ ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್

ಶಾಲೆಯಲ್ಲಿ ‘Yes Sir’ ಬದಲು ಜೈ ಶ್ರೀರಾಮ್: ಯತ್ನಾಳ್​​ ಹೇಳಿಕೆಗೆ ಜನಾರ್ದನ ರೆಡ್ಡಿ ಬೆಂಬಲ!

SCROLL FOR NEXT