ಚಂಡಮಾರುತದಿಂದ ಹಾನಿಯಾದ ಪ್ರದೇಶ 
ದೇಶ

ಒಡಿಶಾ: ಫೋನಿ ಚಂಡಮಾರುತ, ಮೃತರ ಸಂಖ್ಯೆ 43ಕ್ಕೆ ಏರಿಕೆ

ಫೋನಿ ಚಂಡಮಾರುತದಿಂದ ಒಡಿಶಾ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಕಟಕ್ ಹಾಗೂ ಕುರ್ದಾ ಜಿಲ್ಲೆಗಳಲ್ಲಿ ಇಂದು ಕೂಡಾ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಒಡಿಶಾ: ಫೋನಿ ಚಂಡಮಾರುತದಿಂದ ಒಡಿಶಾ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಕಟಕ್ ಹಾಗೂ ಕುರ್ದಾ ಜಿಲ್ಲೆಗಳಲ್ಲಿ ಇಂದು ಕೂಡಾ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚಂಡಮಾರುತದಿಂದಾಗಿ ಒಂದು ವಾರದಿಂದಲೂ ಒಡಿಶಾದ ಕರಾವಳಿ ಭಾಗದ ಪ್ರದೇಶಗಳಲ್ಲಿ ವಿದ್ಯುತ್ , ಕುಡಿಯುವ ನೀರಿನ ಕೊರತೆ  ಉಂಟಾಗಿದ್ದು, ಜನರು ರಸ್ತೆ ತಡೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆಯಲ್ಲಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.

ಮೂಲಸೌಕರ್ಯಗಳ ಕೊರತೆ ಸಮಸ್ಯೆ ಮುಂದಿಟ್ಟುಕೊಂಡು ಭುವನೇಶ್ವರ್ ಮತ್ತು ಪುರಿ ಹಾಗೂ ಪಾರದೀಪ್ ಮತ್ತು ಕಟಕ್ ಸಂಪರ್ಕಿಸುವ ರಸ್ತೆಗಳನ್ನು ತಡೆದು ಜನರು ಪ್ರತಿಭಟನೆ ನಡೆಸಿದರು. ಈ ಮಧ್ಯೆ ವಿದ್ಯುತ್ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ರಾಜ್ಯಸರ್ಕಾರ ಭರವಸೆ ನೀಡಿದೆ.

ರಾಜಧಾನಿ ಭುವನೇಶ್ವರದಲ್ಲೂ ಕಳೆದ 8 ದಿನಗಳಿಂದಲೂ ಇದೇ ರೀತಿಯ ಪ್ರತಿಭಟನೆ ನಡೆಯುತ್ತಲೇ ಇದೆ. ಚಂಡಮಾರುತದಿಂದ ದೇಗುಲ ನಗರ ಪುರಿಯಲ್ಲಿ ತೀವ್ರ ತೊಂದರೆಯಾಗಿದೆ. ಮನೆಗಳನ್ನು ತೊರೆದಿರುವ ಸ್ಥಳೀಯ ನಿವಾಸಿಗಳು ಬೇರೆಡೆಗೆ ವಲಸೆ ಹೋಗಿದ್ದಾರೆ. ಆದಾಗ್ಯೂ, ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಂಡಿರುವುದಾಗಿ ರಾಜ್ಯಸರ್ಕಾರ ಹೇಳುತ್ತಿದೆ.

ರಾಜ್ಯಸರ್ಕಾರದಿಂದ ಪರಿಹಾರ ಘೋಷಣೆಯಾಗಿದ್ದರೂ ನೆರವು ನೀಡದ ಕಂದಾಯ ಇಲಾಖೆಯ ಅಧಿಕಾರಿಯೊಬ್ಬನ್ನನ್ನು ಆಕ್ರೋಸಗೊಂಡ ಜನರು ಹಲ್ಲೆ ನಡೆಸಿರುವ ಘಟನೆ ಜೈಪುರ ಜಿಲ್ಲೆಯ ಬಿಂಜಾರ್ ಪುರ್ ಪ್ರದೇಶದಲ್ಲಿ ನಡೆದಿದೆ. ಅಧಿಕಾರಿ  ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್ ಕೆ ದಾಸ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT