ಮೀರಜ್ 200 ಯುದ್ಧ ವಿಮಾನ 
ದೇಶ

ಪ್ರತಿಕೂಲ ಹವಾಮಾನದಿಂದ ಬಾಂಬ್ ಸೆನ್ಸಾರ್ ಗಳ ಮೇಲೆ ಪರಿಣಾಮವಾಗುತ್ತಿತ್ತು: ಬಾಲಾಕೋಟ್ ದಾಳಿ ಬಗ್ಗೆ ವಾಯುಪಡೆ ಹೇಳಿಕೆ

ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಫೆಬ್ರವರಿ 26ರಂದು ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ...

ನವದೆಹಲಿ: ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಫೆಬ್ರವರಿ 26ರಂದು ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಟಿವಿ ಸಂದರ್ಶನವೊಂದರಲ್ಲಿ ನೀಡಿರುವ ಹೇಳಿಕೆ ಇದೀಗ  ಹಾಸ್ಯಾಸ್ಪದ ಚರ್ಚೆಯನ್ನು ಹುಟ್ಟುಹಾಕಿದೆ.
ಮೇ.11 ರಂದು ಟಿವಿ ಸಂದರ್ಶನದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಬಾಲಾಕೋಟ್ ವೈಮಾನಿಕ ದಾಳಿ ಬಗ್ಗೆ ಇಷ್ಟು ದಿನ ರಹಸ್ಯವಾಗಿದ್ದ ಮಾಹಿತಿಯೊಂದನ್ನು ಬಹಿರಂಗಪಡಿಸಿದರು. ಅದೇನೆಂದರೆ " ವೈಮಾನಿಕ ದಾಳಿ ನಡೆದ ರಾತ್ರಿ ಹೆಚ್ಚು ಮಳೆಯಾಗಿತ್ತು. ನಮ್ಮ ರೇಡಾರ್ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ದಾಳಿಗೆ ವಾತಾವರಣ ಸಹಕಾರಿಯಾಗಿರಲಿಲ್ಲ. ಹಾಗಾಗಿ ವಾಯುದಾಳಿಯ ಬದಲಿಸೋಣ ಎಂಬ ಸಲಹೆಯನ್ನು ಅಧಿಕಾರಿಗಳು ನೀಡಿದ್ದರು. 
ಒಂದು ವೇಳೆ ದಿನಾಂಕ ಮುಂದೂಡಿದ್ರೆ ದಾಳಿಯ ರಹಸ್ಯ ಸೋರಿಕೆ ಆಗುವ ಸಾಧ್ಯತೆ ಇದೆ ಎಂಬ ಸಂಶಯ ಕಾಡಿತ್ತು. ಮೋಡ ಕವಿದಿದ್ದರಿಂದ ರಡಾರ್  ವಿಷಯದಲ್ಲಿ  ಅನಾನುಕೂಲ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಾಗೆಯೇ ಶತ್ರುಗಳ ರಡಾರ್ ಸಹ ಕೆಲಸ ಮಾಡುತ್ತಿರಲ್ಲ. ಕೆಲವು ಸಾರಿ ಮೋಡಗಳು ಸಹಾಯ ಮಾಡುತ್ತವೆ. ಮೋಡಗಳಿಂದಾಗಿ ನಾವು ರಡಾರ್ ನಿಂದ ಸುಲಭವಾಗಿ ತಪ್ಪಿಸಿಕೊಳ್ಳಬಹುದು ಎಂಬ ಆಲೋಚನೆ ಬಂದಿತ್ತು. ಅಧಿಕಾರಿಗಳು ಗೊಂದಲದಲ್ಲಿದ್ದಾಗ ದಾಳಿ ನಡೆಸಲು ಮುನ್ನಡೆಯಿರಿ  ಎಂದು ಅದೇಶಿಸಿದ್ದೆ" ಎಂಬುದನ್ನು ಮೋದಿ ಬಹಿರಂಗಪಡಿಸಿದ್ದರು.
ರಾಜಕೀಯ ವಿರೋಧ ಪಕ್ಷಗಳು ಇದನ್ನು ಹಾಸ್ಯಾಸ್ಪದವಾದಿ ಕಂಡರೆ, ಭಾರತೀಯ ವಾಯುಪಡೆ ಅಧಿಕಾರಿಗಳು ಪ್ರತಿಕೂಲ ಹವಾಮಾನದ ನಡುವೆ ವಾಯುದಾಳಿ ನಡೆಸುವುದರಿಂದ ಅಂತಿಮ ಫಲಿತಾಂಶದ ಮೇಲೆ ಉಂಟಾಗುತ್ತಿದ್ದ ಪರಿಣಾಮದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು ಎಂದು ಹೆಸರು ಹೇಳಲಿಚ್ಛಿಸದ ವಾಯುಪಡೆ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಮೀರಜ್ ಯುದ್ಧ ವಿಮಾನ ನಿಗದಿತ ಗುರಿಯನ್ನು ತಲುಪುವುದು ಸಮಸ್ಯೆಯಾಗಿರಲಿಲ್ಲ, ಸ್ಪ್ಟೈಸ್ -2000 ಸ್ಟಾಂಡ್ ಆಫ್ ಗ್ಲೈಡ್ ಬಾಂಬ್ ನ ಪೆನೆಟ್ರೇಟರ್ ಬಿಡುಗಡೆಯಾದರೆ ಅದರ ಪರಿಣಾಮದ ಬಗ್ಗೆ ಆತಂಕವಿದ್ದಿತ್ತು. ನಿಗದಿತ ಸ್ಥಳಕ್ಕೆ ಬಾಂಬ್ ಹಾಕುವುದಕ್ಕೆ ಮತ್ತು ಬಾಂಬ್ ಸೆನ್ಸರ್ ಮಧ್ಯೆ ಏನೇ ಹೊಂದಾಣಿಕೆ ಕೊರತೆಯಾದರೆ ಮುಂದೆ ಬಹುದೊಡ್ಡ ತೊಂದರೆಯಾಗಲಿದೆ ಎಂಬ ಆತಂಕವುಂಟಾಗಿತ್ತು ಎಂದು ಅಧಿಕಾರಿಗಳು ಹೇಳುತ್ತಾರೆ.
6 ಮೀರಜ್ ವಿಮಾನಗಳಲ್ಲಿ ಒಂದು ವಿಮಾನ ಕೂಡ ಪ್ರತಿಕೂಲ ಹವಾಮಾನದಿಂದ ಬಾಂಬ್ ಬಿಡುಗಡೆ ಮಾಡಲು ಸಾಧ್ಯವಾಗಿರದಿದ್ದರೆ 2016ರಲ್ಲಿ ಭಾರತೀಯ ವಾಯುಪಡೆಯ ಐರನ್ ಫಸ್ಟ್ ದಾಳಿಯಂತಾಗುತ್ತಿತ್ತು. ಆಗ ಹಗುರ ಯುದ್ಧ ವಿಮಾನ ಹಾರಿಸಿದ್ದ ಕ್ಷಿಪಣಿ ಪ್ರತಿಕೂಲ ಹವಾಮಾನದಿಂದಾಗಿ ನಿಗದಿತ ಗುರಿಯನ್ನು ಹೊಡೆದಿರಲಿಲ್ಲ ಎಂದು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT