ಸಂಗ್ರಹ ಚಿತ್ರ 
ದೇಶ

ಮಹತ್ವದ ಕಾರ್ಯಾಚರಣೆ, ಶ್ರೀನಗರದಲ್ಲಿ ಜೈಷ್ ಉಗ್ರನ ಬಂಧನ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಪುಲ್ವಾಮ ಉಗ್ರ ದಾಳಿ ನಡೆಸಿದ್ದ ಜೈಶ್ ಉಗ್ರ ಸಂಘಟನೆಯ ಪ್ರಮುಖ ಉಗ್ರನೋರ್ವನನ್ನು ಸೇನೆ ಬಂಧಿಸಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಪುಲ್ವಾಮ ಉಗ್ರ ದಾಳಿ ನಡೆಸಿದ್ದ ಜೈಶ್ ಉಗ್ರ ಸಂಘಟನೆಯ ಪ್ರಮುಖ ಉಗ್ರನೋರ್ವನನ್ನು ಸೇನೆ ಬಂಧಿಸಿದೆ.
ಈ ಹಿಂದೆ ವಿವಿಧ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ ಜೈಶ್ ಉಗ್ರ ಅಬ್ದುಲ್ ಮಜೀದ್ ಬಾಬಾ ನನ್ನು ದೆಹಲಿ ಪೊಲೀಸರು ಸೇನೆಯ ನೆರವಿನೊಂದಿಗೆ ಬಂಧಿಸಿದ್ದಾರೆ.
ಸೋಪೋರ್ ಜಿಲ್ಲೆಯ ಮಗ್ರೆಪೋರಾ ದಲ್ಲಿ ಮಜೀದ್ ನನ್ನು ಬಂಧಿಸಿದ್ದು, ಈತನ ಸುಳಿವು ಕೊಟ್ಟವರಿಗೆ ಈ ಹಿಂದೆ 2 ಲಕ್ಷ ಬಹುಮಾನ ಘೋಷಣೆ ಮಾಡಲಾಗಿತ್ತು. ಈ ಬಗ್ಗೆ ಮಾಹಿಚಿ ನೀಡಿರುವ ಡೆಪ್ಟುಟಿ ಕಮಿಷನರ್ ಆಫ್ ಪೊಲೀಸ್ ಸಂಜೀವ್ ಕುಮಾರ್ ಯಾದವ್ ಅವರು, ಶನಿವಾರ ಸಂಜೆ ಶ್ರೀನಗರದ ಸೌರಾದಲ್ಲಿ ಮಜೀದ್ ನನ್ನು ಬಂಧಿಸಲಾಗಿದೆ. ಪ್ರಸ್ತುತ ಆತನನ್ನು ದೆಹಲಿಗೆ ಕರೆತಂದಿದ್ದು, ಶ್ರೀನಗರ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರು ಆತನನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT