ಸಾಂದರ್ಭಿಕ ಚಿತ್ರ 
ದೇಶ

ಚೆನ್ನೈ: ವಾರದ ಹಿಂದೆ ಬಾಲ್ಯ ವಿವಾಹ ತಡೆದಿದ್ದ ವ್ಯಕ್ತಿಯ ಬರ್ಬರ ಹತ್ಯೆ

ವಾರದ ಹಿಂದಷ್ಟೇ ಬಾಲ್ಯ ವಿವಾಹವೊಂದನ್ನು ತಡೆದಿದ್ದ ವ್ಯಕ್ತಿಯನ್ನು ಆತನ ಪತ್ನಿ ಮತ್ತು ಕುಟುಂಬ ಸದಸ್ಯರ ಎದುರೇ ಬರ್ಬರವಾಗಿ ಹತ್ಯೆ ಮಾಡಿರುವ...

ಚೆನ್ನೈ: ವಾರದ ಹಿಂದಷ್ಟೇ ಬಾಲ್ಯ ವಿವಾಹವೊಂದನ್ನು ತಡೆದಿದ್ದ ವ್ಯಕ್ತಿಯನ್ನು ಆತನ ಪತ್ನಿ ಮತ್ತು ಕುಟುಂಬ ಸದಸ್ಯರ ಎದುರೇ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಚೆನ್ನೈನಲ್ಲಿ ನೆಡೆದಿದೆ.
ಹತ್ಯೆಯಾದ ವ್ಯಕ್ತಿ ಕಳೆದ ವಾರ ತಮ್ಮ ಪ್ರದೇಶದ ಅಯನಾವರಂನಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆದಿದ್ದರು. ಇದೀಗ ಆತನನ್ನು ಶಸ್ತ್ರ ಸಜ್ಜಿತ ವ್ಯಕ್ತಿಗಳ ಗುಂಪು ಕೊಲೆ ಮಾಡಿದ್ದು, ದುಷ್ಕರ್ಮಿಗಳ ದಾಳಿ ತಡೆಯಲು ಯತ್ನಿಸಿದ ಆತನ ಪತ್ನಿ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹತ್ಯೆಯಾದ ವ್ಯಕ್ತಿ ಅಯನಾವರಂ ನಿವಾಸಿ, 48 ವರ್ಷದ ಜೆಬಸೀಲನ್ ಎಂದು ಗುರುತಿಸಲಾಗಿದ್ದು, ಬಾಲ್ಯ ವಿವಾಹ ತಡೆದದ್ದಕ್ಕೆ ಪ್ರತೀಕರವಾಗಿ ಕೊಲೆ ಮಾಡಲಾಗಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆಟೋ ಚಾಲಕರಾಗಿದ್ದ ಜೆಬಸೀಲನ್ ಅವರು ಮಗಳ ಮದುವೆ ಆರತಕ್ಷತೆಗೆ ಆಟೋದಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾರ್ವಜನಿಕವಾಗಿಯೇ ಈ ದಾಳಿ ನಡೆದಿದ್ದು, ಆತನ ಸಂಬಂಧಿಗಳು ಅಸಹಾಯಕರಾಗಿ ನೋಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಏಪ್ರಿಲ್ 17ರಂದು 16 ವರ್ಷದ ಬಾಲಕಿಗೆ ಮದುವೆ ಮಾಡುತ್ತಿರುವ ವಿಚಾರ ತಿಳಿದು, ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಲ್ಲದೆ ಪೊಲೀಸರೊಂದಿಗೆ ತಾನೂ ಆಗಮಿಸಿ ಬಾಲ್ಯ ವಿವಾಹವನ್ನು ತಡೆದಿದ್ದರು. ಎರಡು ದಿನಗಳ ಹಿಂದಷ್ಟೇ ಜಬಸೀಲನ್ ಅವರ ಮಗಳ ಮದುವೆ ತಿರುಪತಿಯಲ್ಲಿ ನಡೆದಿತ್ತು. ಮಗಳ ಆರತಕ್ಷತೆಯ ದಿನ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT