ಸಾಂದರ್ಭಿಕ ಚಿತ್ರ 
ದೇಶ

ಚೆನ್ನೈ: ವಾರದ ಹಿಂದೆ ಬಾಲ್ಯ ವಿವಾಹ ತಡೆದಿದ್ದ ವ್ಯಕ್ತಿಯ ಬರ್ಬರ ಹತ್ಯೆ

ವಾರದ ಹಿಂದಷ್ಟೇ ಬಾಲ್ಯ ವಿವಾಹವೊಂದನ್ನು ತಡೆದಿದ್ದ ವ್ಯಕ್ತಿಯನ್ನು ಆತನ ಪತ್ನಿ ಮತ್ತು ಕುಟುಂಬ ಸದಸ್ಯರ ಎದುರೇ ಬರ್ಬರವಾಗಿ ಹತ್ಯೆ ಮಾಡಿರುವ...

ಚೆನ್ನೈ: ವಾರದ ಹಿಂದಷ್ಟೇ ಬಾಲ್ಯ ವಿವಾಹವೊಂದನ್ನು ತಡೆದಿದ್ದ ವ್ಯಕ್ತಿಯನ್ನು ಆತನ ಪತ್ನಿ ಮತ್ತು ಕುಟುಂಬ ಸದಸ್ಯರ ಎದುರೇ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಚೆನ್ನೈನಲ್ಲಿ ನೆಡೆದಿದೆ.
ಹತ್ಯೆಯಾದ ವ್ಯಕ್ತಿ ಕಳೆದ ವಾರ ತಮ್ಮ ಪ್ರದೇಶದ ಅಯನಾವರಂನಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆದಿದ್ದರು. ಇದೀಗ ಆತನನ್ನು ಶಸ್ತ್ರ ಸಜ್ಜಿತ ವ್ಯಕ್ತಿಗಳ ಗುಂಪು ಕೊಲೆ ಮಾಡಿದ್ದು, ದುಷ್ಕರ್ಮಿಗಳ ದಾಳಿ ತಡೆಯಲು ಯತ್ನಿಸಿದ ಆತನ ಪತ್ನಿ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹತ್ಯೆಯಾದ ವ್ಯಕ್ತಿ ಅಯನಾವರಂ ನಿವಾಸಿ, 48 ವರ್ಷದ ಜೆಬಸೀಲನ್ ಎಂದು ಗುರುತಿಸಲಾಗಿದ್ದು, ಬಾಲ್ಯ ವಿವಾಹ ತಡೆದದ್ದಕ್ಕೆ ಪ್ರತೀಕರವಾಗಿ ಕೊಲೆ ಮಾಡಲಾಗಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆಟೋ ಚಾಲಕರಾಗಿದ್ದ ಜೆಬಸೀಲನ್ ಅವರು ಮಗಳ ಮದುವೆ ಆರತಕ್ಷತೆಗೆ ಆಟೋದಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾರ್ವಜನಿಕವಾಗಿಯೇ ಈ ದಾಳಿ ನಡೆದಿದ್ದು, ಆತನ ಸಂಬಂಧಿಗಳು ಅಸಹಾಯಕರಾಗಿ ನೋಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಏಪ್ರಿಲ್ 17ರಂದು 16 ವರ್ಷದ ಬಾಲಕಿಗೆ ಮದುವೆ ಮಾಡುತ್ತಿರುವ ವಿಚಾರ ತಿಳಿದು, ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಲ್ಲದೆ ಪೊಲೀಸರೊಂದಿಗೆ ತಾನೂ ಆಗಮಿಸಿ ಬಾಲ್ಯ ವಿವಾಹವನ್ನು ತಡೆದಿದ್ದರು. ಎರಡು ದಿನಗಳ ಹಿಂದಷ್ಟೇ ಜಬಸೀಲನ್ ಅವರ ಮಗಳ ಮದುವೆ ತಿರುಪತಿಯಲ್ಲಿ ನಡೆದಿತ್ತು. ಮಗಳ ಆರತಕ್ಷತೆಯ ದಿನ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT