ಅಭಿನಂದನ್ 
ದೇಶ

ಅಭಿನಂದನ್ ಗೆ ಪಾಕಿಸ್ತಾನದ ಐಎಸ್ಐನಿಂದ ನಿರಂತರ 40 ಗಂಟೆಗಳ ಕಾಲ ಚಿತ್ರಹಿಂಸೆ!

ಬಾಲಾಕೋಟ್ ವೈಮಾನಿಕ ದಾಳಿ ನಂತರ ಭಾರತ-ಪಾಕಿಸ್ತಾನದ ನಡುವೆ ಉಂಟಾಗಿದ್ದ ಪ್ರಕ್ಷುಬ್ಧ ವಾತಾವರಣದ ಸಂದರ್ಭದಲ್ಲಿ ಪಾಕಿಸ್ತಾನ ಸೇನೆ ಗಡಿಯಲ್ಲಿ ಸೆರೆ ಹಿಡಿದಿದ್ದ ಐಎಎಫ್ ಯೋಧ ಅಭಿನಂದನ್ ಗೆ

ಬಾಲಾಕೋಟ್ ವೈಮಾನಿಕ ದಾಳಿ ನಂತರ ಭಾರತ-ಪಾಕಿಸ್ತಾನದ ನಡುವೆ ಉಂಟಾಗಿದ್ದ ಪ್ರಕ್ಷುಬ್ಧ ವಾತಾವರಣದ ಸಂದರ್ಭದಲ್ಲಿ ಪಾಕಿಸ್ತಾನ ಸೇನೆ ಗಡಿಯಲ್ಲಿ ಸೆರೆ ಹಿಡಿದಿದ್ದ ಐಎಎಫ್ ಯೋಧ ಅಭಿನಂದನ್ ಗೆ ಸತತ 40 ಗಂಟೆಗಳ ಕಾಲ ಚಿತ್ರಹಿಂಸೆ ನೀಡಿದ್ದು ಈಗ ಬಹಿರಂಗಗೊಂಡಿದೆ. 
ಅಭಿನಂದನ್ ವರ್ಧಮಾನ್ ಅವರನ್ನು ಸೆರೆ ಹಿಡಿದ ಕೆಲವೇ ಗಂಟೆಗಳಲ್ಲಿ, ಪಾಕ್ ಸೇನೆಯಿಂದ ಐಎಸ್ಐ (ಪಾಕ್ ಗುಪ್ತಚರ ಸಂಸ್ಥೆ) ಗೆ ಹಸ್ತಾಂತರಿಸಿ ಇಸ್ಲಾಮಾಬಾದ್ ನಿಂದ ರಾವಲ್ಪಿಂಡಿಗೆ ಕಳಿಸಲಾಯಿತು. ಎರಡು ದಿನಗಳ ಕಾಲ ತನಿಖಾ ಸೆಲ್ ನಲ್ಲಿ ಇರಿಸಲಾಗಿದ್ದ ಅಭಿನಂದನ್ ವರ್ಧಮಾನ್ ಗೆ ಐಎಸ್ ಐ 40 ಗಂಟೆಗಳ ವರೆಗೆ ಚಿತ್ರಹಿಂಸೆ ನೀಡಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ಈಗ ಬಹಿರಂಗಪಡಿಸಿದೆ.
ವಿಚಾರಣೆ ವೇಳೆ ಅಭಿನಂದನ್ ಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಚಿತ್ರಹಿಂಸೆ ನೀಡಲಾಗಿದೆ. ಅಭಿನಂದನ್ ಇದ್ದ ಕೊಠಡಿಯಲ್ಲಿ  ಅತಿಯಾದ ಬೆಳಕು ಹಾಗೂ ಅತಿಯಾದ ಧ್ವನಿಯಲ್ಲಿ ಸಂಗೀತವನ್ನು ಹಾಕಿದ್ದರು. ಪ್ರತಿ ಅರ್ಧ ಗಂಟೆಗೆ ಬರುತ್ತಿದ್ದ ವ್ಯಕ್ತಿ ತನಗೆ ದೈಹಿಕ ಹಿಂಸೆ (ಹೊಡೆಯುವುದು) ನೀಡುತ್ತಿದ್ದ. ಎಂದು ವಿಂಗ್ ಕಮಾಂಡರ್ ಅಭಿನಂದನ್ ಇಲ್ಲಿನ ಅಧಿಕಾರಿಗಳೊಂದಿಗಿನ ವಿಚಾರಣೆಯ ವೇಳೆ ಹೇಳಿದ್ದಾರೆ. 
ಐಎಸ್ ಐ ವಶಕ್ಕೆ ನೀಡಿ ರಾವಲ್ಪಿಂಡಿಗೆ ಹೋಗುವುದಕ್ಕೂ ಮುನ್ನ ಪಾಕಿಸ್ತಾನ ಸೇನೆ ತಮ್ಮನ್ನು ಚೆನ್ನಾಗಿ ನೋಡಿಕೊಂಡಿತ್ತು. ಸೇನಾ ಮೆಸ್ ನಲ್ಲಿ ಚಹಾ ನೀಡಿದ್ದರು. ತಾವು ಚಹಾ ಕುಡಿಯುತ್ತಿರುವ ವಿಡಿಯೋವನ್ನು ಮೆಸ್ ನಲ್ಲಿ ತೆಗೆಯಲಾಗಿತ್ತು. ಆದರೆ ಪಾಕಿಸ್ತಾನ ಸೇನೆಯನ್ನು ಹೊಗಳಿರುವ ಎರಡನೇ ವಿಡಿಯೋ ನಕಲಿಯದ್ದು ಎಂದು ಸ್ವತಃ ಅಭಿನಂದನ್ ಹೇಳಿದ್ದಾರೆ. 
ಪಾಕಿಸ್ತಾನದ ಸೇನೆಯನ್ನು ಹೊಗಳಿರುವ ತನ್ನ ವಿಡಿಯೋದಲ್ಲಿರುವುದು ನನ್ನ ಧ್ವನಿಯಲ್ಲ, ನನ್ನ ಧ್ವನಿಯ ಜೊತೆಗೆ ಅಲ್ಲಿರುವ ಧ್ವನಿಯನ್ನು ಹೋಲಿಕೆ ಮಾಡಿ ನೋಡಬಹುದು ಎಂದು ಅಭಿನಂದನ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT