ಸಂಗ್ರಹ ಚಿತ್ರ 
ದೇಶ

ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ: ಕಮಲ್ ಹಾಸನ್

ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ ಎಂದು ಹೇಳುವ ಮೂಲಕ ನಟ ಕಮಲ್ ಹಾಸನ್ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

ಕೊಯಮತ್ತೂರು: ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ ಎಂದು ಹೇಳುವ ಮೂಲಕ ನಟ ಕಮಲ್ ಹಾಸನ್ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.
ಈ ಹಿಂದೆ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಹಿಂದೂ ಧರ್ಮದ ಮೊದಲ ಭಯೋತ್ಪಾದಕ ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದ ನಟ ಕಮಲ್ ಹಾಸನ್ ಮೇಲೆ ನಿನ್ನೆ ಚಪ್ಪಲಿ ಮತ್ತು ಇಂದು ಮೊಟ್ಟೆ, ಕಲ್ಲು ತೂರಾಟ ಮಾಡಲಾಗಿತ್ತು. ತಮ್ಮ ಮೇಲಿನ ದಾಳಿಗಳ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುನ ನಟ ಕಮಲ್ ಹಾಸನ್, ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ. 
ಇದೇ ಹಿನ್ನಲೆಯಲ್ಲಿ ನಾನು ಹೇಳಿಕೆ ನೀಡಿದ್ದೆ. ಒಂದು ವೇಳೆ ನನ್ನ ಬಂಧಿಸುವುದಾದರೇ ಬಂಧಿಸಲಿ.. ಆದರೆ ನನ್ನ ಬಂಧನದಿಂದ ಮತ್ತಷ್ಟು ಸಮಸ್ಯೆಗಳು ಉದ್ಭವವಾಗಲಿದೆ. ಇದು ಎಚ್ಚರಿಕೆಯಲ್ಲ ಕೇವಲ ಸಲಹೆ ಮಾತ್ರ ಎಂದು ಹೇಳಿದರು.
ಪ್ರತೀಯೊಂದು ಧರ್ಮದಲ್ಲಿ ಅದರದೇ ಆದ ಭಯೋತ್ಪಾದನೆ ಇರುತ್ತದೆ. ನಾವು ಯಾರೂ ನಾವು ಪವಿತ್ರರು ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಪ್ರತೀಯೊಂದು ಧರ್ಮದಲ್ಲೂ ಆತಂಕವಾದಿಗಳು ಇದ್ದಾರೆ ಎಂಬುದನ್ನು ಇತಿಹಾಸವೇ ತಿಳಿಸಿದೆ ಎಂದು ಹೇಳಿದ್ದಾರೆ.
ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಹಿಂದೂ ಧರ್ಮದ ಮೊದಲ ಭಯೋತ್ಪಾದಕ ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದ ನಟ ಕಮಲ್ ಹಾಸನ್ ಮೇಲೆ ಆಕ್ರೋಶಗೊಂಡಿದ್ದ ಹಿಂದೂಪರ ಕಾರ್ಯಕರ್ತರು, ಕಮಲ್ ಹಾಸನ್ ಪಾಲ್ಗೊಂಡಿದ್ದ ಕಾರ್ಯಕ್ರಮಗಳ ಮೇಲೆ ದಾಳಿ ಮಾಡಿದ್ದಾರೆ. ನಿನ್ನೆ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಮಲ್ ಹಾಸನ್ ಮೇಲೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಚಪ್ಪಲಿ ಎಸೆದಿದ್ದರು. ಇಂದು ಕೊಯಮತ್ತೂರಿನಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಮೊಟ್ಟೆ ಮತ್ತು ಕಲ್ಲು ತೂರಾಟ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!