ಸಂಗ್ರಹ ಚಿತ್ರ 
ದೇಶ

ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ: ಕಮಲ್ ಹಾಸನ್

ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ ಎಂದು ಹೇಳುವ ಮೂಲಕ ನಟ ಕಮಲ್ ಹಾಸನ್ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

ಕೊಯಮತ್ತೂರು: ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ ಎಂದು ಹೇಳುವ ಮೂಲಕ ನಟ ಕಮಲ್ ಹಾಸನ್ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.
ಈ ಹಿಂದೆ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಹಿಂದೂ ಧರ್ಮದ ಮೊದಲ ಭಯೋತ್ಪಾದಕ ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದ ನಟ ಕಮಲ್ ಹಾಸನ್ ಮೇಲೆ ನಿನ್ನೆ ಚಪ್ಪಲಿ ಮತ್ತು ಇಂದು ಮೊಟ್ಟೆ, ಕಲ್ಲು ತೂರಾಟ ಮಾಡಲಾಗಿತ್ತು. ತಮ್ಮ ಮೇಲಿನ ದಾಳಿಗಳ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುನ ನಟ ಕಮಲ್ ಹಾಸನ್, ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ. 
ಇದೇ ಹಿನ್ನಲೆಯಲ್ಲಿ ನಾನು ಹೇಳಿಕೆ ನೀಡಿದ್ದೆ. ಒಂದು ವೇಳೆ ನನ್ನ ಬಂಧಿಸುವುದಾದರೇ ಬಂಧಿಸಲಿ.. ಆದರೆ ನನ್ನ ಬಂಧನದಿಂದ ಮತ್ತಷ್ಟು ಸಮಸ್ಯೆಗಳು ಉದ್ಭವವಾಗಲಿದೆ. ಇದು ಎಚ್ಚರಿಕೆಯಲ್ಲ ಕೇವಲ ಸಲಹೆ ಮಾತ್ರ ಎಂದು ಹೇಳಿದರು.
ಪ್ರತೀಯೊಂದು ಧರ್ಮದಲ್ಲಿ ಅದರದೇ ಆದ ಭಯೋತ್ಪಾದನೆ ಇರುತ್ತದೆ. ನಾವು ಯಾರೂ ನಾವು ಪವಿತ್ರರು ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಪ್ರತೀಯೊಂದು ಧರ್ಮದಲ್ಲೂ ಆತಂಕವಾದಿಗಳು ಇದ್ದಾರೆ ಎಂಬುದನ್ನು ಇತಿಹಾಸವೇ ತಿಳಿಸಿದೆ ಎಂದು ಹೇಳಿದ್ದಾರೆ.
ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಹಿಂದೂ ಧರ್ಮದ ಮೊದಲ ಭಯೋತ್ಪಾದಕ ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದ ನಟ ಕಮಲ್ ಹಾಸನ್ ಮೇಲೆ ಆಕ್ರೋಶಗೊಂಡಿದ್ದ ಹಿಂದೂಪರ ಕಾರ್ಯಕರ್ತರು, ಕಮಲ್ ಹಾಸನ್ ಪಾಲ್ಗೊಂಡಿದ್ದ ಕಾರ್ಯಕ್ರಮಗಳ ಮೇಲೆ ದಾಳಿ ಮಾಡಿದ್ದಾರೆ. ನಿನ್ನೆ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಮಲ್ ಹಾಸನ್ ಮೇಲೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಚಪ್ಪಲಿ ಎಸೆದಿದ್ದರು. ಇಂದು ಕೊಯಮತ್ತೂರಿನಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಮೊಟ್ಟೆ ಮತ್ತು ಕಲ್ಲು ತೂರಾಟ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT