ಸಂಗ್ರಹ ಚಿತ್ರ 
ದೇಶ

ಶರದಾ ಹಗರಣ: ದೀದಿಗೆ ಭಾರಿ ಹಿನ್ನಡೆ, ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ಗೆ ಬಂಧನ ಭೀತಿ!

ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತರಿಗೆ ಸುಪ್ರೀಂ ಕೋರ್ಟ್ ನೀಡಿದ್ದ 'ಬಂಧನದಿಂದ ಸುರಕ್ಷತೆ' ಆದೇಶವನ್ನು ತೆರುವು ಗೊಳಿಸಿದ್ದು, ರಾಜೀವ್ ಕುಮಾರ್ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.

ನವದೆಹಲಿ: ಶರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತರಿಗೆ ಸುಪ್ರೀಂ ಕೋರ್ಟ್ ನೀಡಿದ್ದ 'ಬಂಧನದಿಂದ ಸುರಕ್ಷತೆ' ಆದೇಶವನ್ನು ತೆರುವು ಗೊಳಿಸಿದ್ದು, ರಾಜೀವ್ ಕುಮಾರ್ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.
ಶರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಆಧಿಕಾರಿ ರಾಜೀವ್ ಕುಮಾರ್ ಅವರ ವಿರುದ್ಧ ಸಾಕ್ಷ್ಯ ನಾಶ ಪಡಿಸಿದ ಗಂಭೀರ ಆರೋಪವಿದ್ದು, ಈ ಹಿಂದೆ ಇದಕ್ಕೆ ಸಂಬಂಧಿಸಿದಂತೆ ಅವರನ್ನು ವಿಚಾರಣೆಗೊಳಪಡಿಸಲು ಸಿಬಿಐ ಅಧಿಕಾರಿಗಳು ಮುಂದಾದಾಗ ಅವರನ್ನೇ ಕೋಲ್ಕತಾ ಪೊಲೀಸರು ಬಂಧಿಸಿದ್ದರು. ಈ ವೇಳೆ ಪಶ್ಚಿಮ ಬಂಗಾಳದಲ್ಲಿ ದೊಡ್ಡ ಹೈಡ್ರಾಮ ಏರ್ಪಟ್ಟಿತ್ತು. 
ಕೇಂದ್ರ ಸರ್ಕಾರ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಮಮತಾ ಬ್ಯಾನರ್ಜಿ ಆಹೋರಾತ್ರಿ ಧರಣಿ ಕೂಡ ನಡೆಸಿದ್ದರು. ಬಳಿಕ ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ರಾಜೀವ್ ಕುಮಾರ್ ಅವರಿಗೆ ಬಂಧನದಿಂದ ರಕ್ಷಣೆ ನೀಡಿತ್ತು. ಇದೀಗ ಸಿಬಿಐ ವಾದಕ್ಕೆ ಮನ್ನಣೆ ನೀಡಿರುವ ಸುಪ್ರೀಂ ಕೋರ್ಟ್ ತಾನು ರಾಜೀವ್ ಕುಮಾರ್ ಅವರ ಮೇಲೆ ವಿದಿಸಿದ್ದ ಬಂಧನದಿಂದ ಸುರಕ್ಷತೆ ಆದೇಶವನ್ನು ಹಿಂದಕ್ಕೆ ಪಡೆದುಕೊಂಡಿದೆ. ಆ ಮೂಲಕ ಅಗತ್ಯತೆ ಇದ್ದರೆ ರಾಜೀವ್ ಕುಮಾರ್ ರನ್ನು ಸಿಬಿಇ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುವ ಅವಕಾಶ ನೀಡಿದಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT