ದೇಶ

ನಾಯ್ಡು-ಮಮತಾ ಮಾತುಕತೆ: ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಬಿಜೆಪಿಯೇತರ ಸರ್ಕಾರ ರಚನೆ ಬಗ್ಗೆ ಚರ್ಚೆ

Nagaraja AB
ನವದೆಹಲಿ: ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳು ಹೊರಬಿದ್ದ ಬೆನ್ನಲ್ಲೇ  ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಬಿಜೆಪಿ ನೇತೃತ್ವದ ಎನ್ ಡಿಎ ಮತ್ತೊಂದು ಬಾರಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿರುವ ಕಾರಣ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಇನ್ನೊಂದು ದಿಕ್ಕಿನಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಪ್ರತಿಪಕ್ಷಗಳಿಗೆ ಆಘಾತವಾಗಿದ್ದು, ಆತಂಕದ ನಡುವೆಯೇ ಮುಂದಿನ ಕಾರ್ಯತಂತ್ರದ ಬಗ್ಗೆ ಲೆಕ್ಕಾಚಾರಗಳನ್ನು ಶುರು ಮಾಡಿವೆ.
SCROLL FOR NEXT