ರವಿಶಂಕರ್ ಪ್ರಸಾದ್ 
ದೇಶ

ಸೋಲನ್ನು ಒಪ್ಪಿಕೊಳ್ಳಿ, ಇವಿಎಂ ದೂಷಿಸಬೇಡಿ: ರವಿಶಂಕರ್ ಪ್ರಸಾದ್

ವಿದ್ಯುನ್ಮಾನ ಮತಯಂತ್ರಗಳ ಮೇಲೆ ಸಂಶಯ ವ್ಯಕ್ತಪಡಿಸುವ ಬದಲು ಪ್ರತಿಪಕ್ಷಗಳು ಸೋಲನ್ನು ಒಪ್ಪಿಕೊಳ್ಳುವಂತೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ...

ನವದೆಹಲಿ:  ವಿದ್ಯುನ್ಮಾನ ಮತಯಂತ್ರಗಳ ಮೇಲೆ ಸಂಶಯ ವ್ಯಕ್ತಪಡಿಸುವ ಬದಲು ಪ್ರತಿಪಕ್ಷಗಳು ಸೋಲನ್ನು ಒಪ್ಪಿಕೊಳ್ಳುವಂತೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಕರೆ ನೀಡಿದ್ದಾರೆ.
ಮತ್ತೊಂದು ಬಾರಿಯೂ ನರೇಂದ್ರ ಮೋದಿ ಅವರು ಭರ್ಜರಿ ಬಹುಮತದೊಂದಿಗೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿರುವ ಅವರು ವಿಪಕ್ಷಗಳು ಸೋಲನ್ನು ಒಪ್ಪಿಕೊಳ್ಳಲೇಬೇಕಾಗಿದೆ ಎಂದು ತಿಳಿಸಿದ್ದಾರೆ.
ಮಮತಾ ಬ್ಯಾನರ್ಜಿ, ಎನ್ ಚಂದ್ರಬಾಬು ನಾಯ್ಡು ಮತ್ತು ಅಮರೀಂದರ್ ಸಿಂಗ್ ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿಯಾಗಲು ಯಾವುದೇ ತೊಂದರೆಯಾಗಲಿಲ್ಲ. ಆದರೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಮಾತ್ರ ಇವಿಎಂ ಸರಿ ಇರೋದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಎರಡು ಬಾರಿ ಪಶ್ಚಿಮಬಂಗಾಳ ಮುಖ್ಯಮಂತ್ರಿಯಾದಾಗ ಮಮತಾ ಬ್ಯಾನರ್ಜಿಗೆ ಇವಿಎಂ ಉತ್ತಮವಾಗಿತ್ತು. ಅಮರೀಂದರ್ ಸಿಂಗ್ ಗೆ ಪಂಜಾಬ್ ಮುಖ್ಯಮಂತ್ರಿಯಾದಾಗಲೂ ಇವಿಎಂ ಸರಿ ಇತ್ತು. ಒಂದು ವೇಳೆ ಅವರು ಗೆದ್ದರೆ ಇವಿಎಂ ಸರಿ ಇದೆ ಎಂದು ಅರ್ಥ! ಆದರೆ ದೇಶದ ಜನರು ಬಯಸಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾದರೆ..ಆಗ ಇವಿಎಂ ಅನ್ನು ನಂಬುವಂತಿಲ್ಲ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT