ರವಿಶಂಕರ್ ಪ್ರಸಾದ್ 
ದೇಶ

ಸೋಲನ್ನು ಒಪ್ಪಿಕೊಳ್ಳಿ, ಇವಿಎಂ ದೂಷಿಸಬೇಡಿ: ರವಿಶಂಕರ್ ಪ್ರಸಾದ್

ವಿದ್ಯುನ್ಮಾನ ಮತಯಂತ್ರಗಳ ಮೇಲೆ ಸಂಶಯ ವ್ಯಕ್ತಪಡಿಸುವ ಬದಲು ಪ್ರತಿಪಕ್ಷಗಳು ಸೋಲನ್ನು ಒಪ್ಪಿಕೊಳ್ಳುವಂತೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ...

ನವದೆಹಲಿ:  ವಿದ್ಯುನ್ಮಾನ ಮತಯಂತ್ರಗಳ ಮೇಲೆ ಸಂಶಯ ವ್ಯಕ್ತಪಡಿಸುವ ಬದಲು ಪ್ರತಿಪಕ್ಷಗಳು ಸೋಲನ್ನು ಒಪ್ಪಿಕೊಳ್ಳುವಂತೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಕರೆ ನೀಡಿದ್ದಾರೆ.
ಮತ್ತೊಂದು ಬಾರಿಯೂ ನರೇಂದ್ರ ಮೋದಿ ಅವರು ಭರ್ಜರಿ ಬಹುಮತದೊಂದಿಗೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿರುವ ಅವರು ವಿಪಕ್ಷಗಳು ಸೋಲನ್ನು ಒಪ್ಪಿಕೊಳ್ಳಲೇಬೇಕಾಗಿದೆ ಎಂದು ತಿಳಿಸಿದ್ದಾರೆ.
ಮಮತಾ ಬ್ಯಾನರ್ಜಿ, ಎನ್ ಚಂದ್ರಬಾಬು ನಾಯ್ಡು ಮತ್ತು ಅಮರೀಂದರ್ ಸಿಂಗ್ ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿಯಾಗಲು ಯಾವುದೇ ತೊಂದರೆಯಾಗಲಿಲ್ಲ. ಆದರೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಮಾತ್ರ ಇವಿಎಂ ಸರಿ ಇರೋದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಎರಡು ಬಾರಿ ಪಶ್ಚಿಮಬಂಗಾಳ ಮುಖ್ಯಮಂತ್ರಿಯಾದಾಗ ಮಮತಾ ಬ್ಯಾನರ್ಜಿಗೆ ಇವಿಎಂ ಉತ್ತಮವಾಗಿತ್ತು. ಅಮರೀಂದರ್ ಸಿಂಗ್ ಗೆ ಪಂಜಾಬ್ ಮುಖ್ಯಮಂತ್ರಿಯಾದಾಗಲೂ ಇವಿಎಂ ಸರಿ ಇತ್ತು. ಒಂದು ವೇಳೆ ಅವರು ಗೆದ್ದರೆ ಇವಿಎಂ ಸರಿ ಇದೆ ಎಂದು ಅರ್ಥ! ಆದರೆ ದೇಶದ ಜನರು ಬಯಸಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾದರೆ..ಆಗ ಇವಿಎಂ ಅನ್ನು ನಂಬುವಂತಿಲ್ಲ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?