ಎಲ್ ಕೆ ಆಡ್ವಾಣಿ ಭೇಟಿಯಾದ ನರೇಂದ್ರ ಮೋದಿ ಮತ್ತು ಅಮಿತ್ ಶಾ 
ದೇಶ

ಅಡ್ವಾಣಿ, ಜೋಷಿ ಭೇಟಿಯಾದ ಪ್ರಧಾನಿ ಮೋದಿ, ಅಮಿತ್ ಶಾ ಜೋಡಿ

ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯಗಳಿಸಿದ ಬಳಿಕ ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ...

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯಗಳಿಸಿದ ಬಳಿಕ ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿಯ ಹಿರಿಯ ನಾಯಕ ಹಾಗೂ ತಮ್ಮ ರಾಜಕೀಯ ಗುರು ಎಲ್‍ ಕೆ ಅಡ್ವಾಣಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಬಿಜೆಪಿಯ ಅಭೂತಪೂರ್ವ ಗೆಲುವು ಸಾಧಿಸಿರುವುದರ ಹಿಂದೆ ಅಡ್ವಾಣಿಯವರ ಕಠಿಣ ಪರಿಶ್ರಮವಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
"ಗೌರವಾನ್ವಿತ ಅಡ್ವಾಣಿಜಿ ಅವರನ್ನು ಭೇಟಿಯಾದೆ. ಬಿಜೆಪಿಯ ಈ ಯಶಸ್ಸಿನ ಹಿಂದೆ ದಶಕಗಳ ಕಾಲ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಅಡ್ವಾಣಿಯವರಂತಹ ಶೇಷ್ಟ್ರ ನಾಯಕರು ಇದ್ದಾರೆ ಮತ್ತು ಅವರು ಜನರಿಗೆ ಪಕ್ಷದ ಸಿದ್ಧಾಂತವನ್ನು ತಲುಪಿಸಿದರು" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಬಿಜೆಪಿಯ ಮತ್ತೋರ್ವ ಹಿರಿಯ ನಾಯಕ ಡಾ.ಎಂ.ಎಂ.ಜೋಷಿ ಅವರನ್ನು ಕೂಡ ಭೇಟಿಯಾದರು.
ಅಡ್ವಾಣಿ ಮತ್ತು ಎಂ.ಎಂ ಜೋಷಿ ಅವರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಇಬ್ಬರು ನಾಯಕರಿಗೆ ಸ್ಪರ್ಧಿಸದಂತೆ ಪಕ್ಷ ಸೂಚಿಸಿತ್ತು. ಅಡ್ವಾಣಿ ಈ ಬಗ್ಗೆ ಯಾವುದೇ ಅಪಸ್ವರ ಎತ್ತಿರಲಿಲ್ಲ. ಆದರೆ ಜೋಷಿ ಅವರು ತಮಗೆ ಪಕ್ಷ ಸ್ಪರ್ಧಿಸದಂತೆ ಪತ್ರ ಬರೆದಿದೆ ಎಂದು ಪತ್ರವನ್ನು ಬಹಿರಂಗಪಡಿಸಿದ್ದರು.
ಅಡ್ವಾಣಿ ಮತ್ತು ಮೋದಿ ನಡುವೆ ಸಂಬಂಧ ಹದಗೆಟ್ಟಿದೆ ಎಂಬ ಮಾತುಗಳು ಪಕ್ಷ ಮತ್ತು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿತ್ತು. ಆದರೆ ಇದೀಗ ಮೋದಿ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟಬಹುಮತ ಪಡೆದ ಬಳಿಕ ಅಡ್ವಾಣಿ ಅವರನ್ನು ನೆನಪಿಸಿಕೊಂಡು ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ SIT ಗೆ ಒತ್ತಾಯ!

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

SCROLL FOR NEXT