ಅಮಿತ್ ಶಾ - ನರೇಂದ್ರ ಮೋದಿ 
ದೇಶ

ಇಂದು ಸಂಜೆ ಕೇಂದ್ರ ಸಂಪುಟ ಸಭೆ, 16ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು

ಭರ್ಜರಿ ಬಹುಮತದೊಂದಿಗೆ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ...

ನವದೆಹಲಿ: ಭರ್ಜರಿ ಬಹುಮತದೊಂದಿಗೆ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸಂಜೆ ಸಚಿವ ಸಂಪುಟ ಸಭೆ ಕರೆದಿದ್ದು, 16ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲಿದ್ದಾರೆ.
ಇಂದು ಸಂಜೆ ನಡೆಯುವ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವ ದಿನ ಹಾಗೂ ಸ್ಥಳದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ಜೂನ್ 3ಕ್ಕೆ 16ನೇ ಲೋಕಸಭೆಯ ಅವಧಿ ಕೊನೆಗೊಳ್ಳುವ ಹಿನ್ನೆಲೆಯಲ್ಲಿ ಲೋಕಸಭೆ ವಿಸರ್ಜನೆ ಮಾಡುವಂತೆ ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಶಿಫಾರಸು ಮಾಡಲಿದೆ.
ರಾಷ್ಟ್ರಪತಿಗಳು ಶಿಫಾರಸ್ಸನ್ನು ಅಂಗೀಕರಿಸಿ ಹಾಲಿ ಲೋಕಸಭೆಯನ್ನು ವಿಸರ್ಜಿಸಿ, ಹೊಸ ಸರ್ಕಾರ ರಚನೆಗೆ ಆಹ್ವಾನ ನೀಡಲಿದ್ದಾರೆ. ಜೂನ್ 3ಕ್ಕೂ ಮೊದಲು 17ನೇ ಲೋಕಸಭೆ ರಚನೆಯಾಗಬೇಕಿದ್ದು, ಇದಕ್ಕಾಗಿ ಚುನಾವಣಾ ಆಯೋಗದ ಮೂವರು ಆಯುಕ್ತರು ಲೋಕಸಭೆಗೆ ಹೊಸದಾಗಿ ಆಯ್ಕೆಯಾಗಿರುವವರ ಪಟ್ಟಿಯನ್ನು ರಾಷ್ಟ್ರಪತಿಗೆ ಸಲ್ಲಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT