ದೇಶ

ತನ್ನ ವಿರುದ್ಧ ಸೋತಿದ್ದ ಶೀಲಾ ದೀಕ್ಷಿತ್ ಆಶೀರ್ವಾದ ಪಡೆದ ಬಿಜೆಪಿ ಸಂಸದ ಮನೋಜ್ ತಿವಾರಿ

Srinivas Rao BV
ನವದೆಹಲಿ: 2019 ರ ಲೋಕಸಭಾ ಚುನಾವಣೆಯಲ್ಲಿ ದೆಹಲಿ ಪೂರ್ವ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಮನೋಜ್ ತಿವಾರಿ ಸಂಸತ್ ಗೆ ಆಯ್ಕೆಗೊಂಡಿದ್ದು, ಎದುರಾಳಿ ಕಾಂಗ್ರೆಸ್ ಪಕ್ಷದ ಶೀಲಾ ದೀಕ್ಷಿತ್ ಅವರನ್ನು ಮಣಿಸಿದ್ದರು. 
ಸಂಸತ್ ಸದಸ್ಯರಾಗಿ ಆಯ್ಕೆಗೊಂಡ ಬಳಿಕ ಮನೋಜ್ ತಿವಾರಿ, ಶೀಲಾ ದೀಕ್ಷಿತ್ ಅವರನ್ನು ಭೇಟಿ ಮಾಡಿದ್ದು, ಆಶೀರ್ವಾದ ಪಡೆದಿದ್ದಾರೆ. ಮನೋಜ್ ತಿವಾರಿ ಶೀಲಾ ದೀಕ್ಷಿತ್ ವಿರುದ್ಧ 3,66,102 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು.
SCROLL FOR NEXT