ನಿನ್ನೆ ರಾಷ್ಟ್ರಪತಿ ಭವನಕ್ಕೆ ತೆರಳಿ ಪ್ರಧಾನಿ ಹುದ್ದೆಗೆ ರಾಜೀನಾಮೆ ಪತ್ರ ಸಲ್ಲಿಸಿದ ನರೇಂದ್ರ ಮೋದಿ 
ದೇಶ

ಮೋದಿ ಸಚಿವ ಸಂಪುಟದಲ್ಲಿ ಈ ಬಾರಿ ಅರ್ಧದಷ್ಟು ಹೊಸ ಮುಖಗಳಿಗೆ ಆದ್ಯತೆ

ಮತ್ತೊಮ್ಮೆ ಪ್ರಧಾನಿ ಗಾದಿಗೆ ಏರಲು ಸಜ್ಜಾಗಿರುವ ನರೇಂದ್ರ ಮೋದಿ ತಮ್ಮ ಸಚಿವ ಸಂಪುಟಕ್ಕೆ ಹೊಸ...

ನವದೆಹಲಿ: ಮತ್ತೊಮ್ಮೆ ಪ್ರಧಾನಿ ಗಾದಿಗೆ ಏರಲು ಸಜ್ಜಾಗಿರುವ ನರೇಂದ್ರ ಮೋದಿ ತಮ್ಮ ಸಚಿವ ಸಂಪುಟಕ್ಕೆ ಹೊಸ ಸಚಿವರುಗಳ ಆಯ್ಕೆ ಕೆಲಸಕ್ಕೆ ಚಾಲನೆ ನೀಡಿದ್ದಾರೆ. ಇದಕ್ಕೆ ಪಕ್ಷದ ಬೇರೆ ನಾಯಕರ ಜೊತೆ ಸಮಾಲೋಚನೆ ಮಾಡುತ್ತಿದ್ದಾರೆ.
ಮುಂದಿನ 5 ವರ್ಷಗಳಲ್ಲಿ ಪಕ್ಷದಲ್ಲಿ ಸಮರ್ಥ ನಾಯಕತ್ವ ವಹಿಸುವ ಮತ್ತು ಸರ್ಕಾರದಲ್ಲಿ ಖಾತೆಗಳಿಗೆ ಸೂಕ್ತ ಸಂಸದರನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ನರೇಂದ್ರ ಮೋದಿ ಗಮನಹರಿಸಿದ್ದಾರೆ. ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ ಶೇಕಡಾ 50ರಷ್ಟು ಈ ಬಾರಿ ಸಂಪುಟದಲ್ಲಿ ಹೊಸ ಮುಖಗಳಿಗೆ ಮಣೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಬಾರಿ ದೇಶದ ದಕ್ಷಿಣ ಮತ್ತು ಪೂರ್ವ ವಲಯದ ಸಂಸದರಿಗೆ ಮೋದಿ ಹೆಚ್ಚಿನ ಪ್ರಾಧಾನ್ಯತೆ ನೀಡುವ ಸಾಧ್ಯತೆಯಿದೆ.
ಸ್ಥಳೀಯ ಸಮತೋಲನ ಮತ್ತು ನವ ಭಾರತ ಪರ ನಾಯಕತ್ವ ಸೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಚಿವರುಗಳನ್ನು ಎನ್ ಡಿಎ 2.0 ಸರ್ಕಾರದಲ್ಲಿ ಆಯ್ಕೆ ಮಾಡುವ ಸಾಧ್ಯತೆಯಿದೆ. ವೃತ್ತಿಪರರಿಗೆ ಆದ್ಯತೆ ನೀಡುವ ಸಾಧ್ಯತೆಯಿದೆ. ಬಿಜೆಪಿ ಈಗಲೂ ಕರ್ನಾಟಕ ಸೇರಿದಂತೆ ಇತರ ದಕ್ಷಿಣದ ರಾಜ್ಯಗಳಿಗೆ ಪ್ರಾತಿನಿಧ್ಯ ನೀಡಲು ಬದ್ಧವಾಗಿದ್ದು ಈ ನಿಟ್ಟಿನಲ್ಲಿ ಮಿಷನ್ ಸೌತ್ ಕಾರ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದಾರೆ.
ಸಚಿವ ಸಂಪುಟ ರಚನೆ ವೇಳೆ ಉತ್ತರ ಪ್ರದೇಶಕ್ಕೆ ಸಿಂಹಪಾಲು ದೊರಕುವ ಸಾಧ್ಯತೆಯಿದೆ. ಬಿಹಾರಕ್ಕೆ 8, ಮಧ್ಯ ಪ್ರದೇಶ, ಕರ್ನಾಟಕ, ಮಹಾರಾಷ್ಟ್ರ ಮತ್ತು ರಾಜಸ್ತಾನಗಳಿಗೆ ತಲಾ 6 ಮಂತ್ರಿ ಸ್ಥಾನ, ಪಶ್ಚಿಮ ಬಂಗಾಳ, ಒಡಿಶಾಗಳಿಗೆ ತಲಾ ಮೂರು ಸಚಿವ ಸ್ಥಾನ ಲಭಿಸುವ ಸಾಧ್ಯತೆಯಿದೆ. ಅಸ್ಸಾಂ, ಕೇರಳ, ತೆಲಂಗಾಣ ಮತ್ತು ಈಶಾನ್ಯ ರಾಜ್ಯಗಳಿಗೆ ಪ್ರಾತಿನಿಧ್ಯ ಸಿಗುವ ಸಾಧ್ಯತೆಯಿದೆ.
ಇನ್ನು ಹರ್ಯಾಣ, ಜಾರ್ಖಂಡ್ ಮತ್ತು ಮಹಾರಾಷ್ಟ್ರಗಳಲ್ಲಿ ಬುಡಕಟ್ಟು ಮತ್ತು ಪರಿಶಿಷ್ಟ ಜಾತಿ ನಾಯಕರುಗಳಿಗೆ ಆದ್ಯತೆ ನೀಡಲು ವಸುಂಧರಾ ರಾಜೆ ಮತ್ತು ರಮಣ್ ಸಿಂಗ್ ಅವರಿಗೆ ಈ ಬಾರಿ ಮೋದಿ ಸಂಪುಟದಲ್ಲಿ ಸ್ಥಾನ ದೊರಕುವ ಸಾಧ್ಯತೆಯಿದೆ.
ಮಾಜಿ ಐಎಎಸ್ ಅಧಿಕಾರಿ ಅಪರಾಜಿತ ಸಾರಂಗಿಯವರಿಗೆ ರಾಜ್ಯ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ. ಎನ್ ಡಿಎ ಮೈತ್ರಿಕೂಟ ಜೆಡಿಯುನಲ್ಲಿ ಕೂಡ ಕೆಲವರಿಗೆ ಮೋದಿ ಸಂಪುಟದಲ್ಲಿ ಮಣೆ ಹಾಕುವ ಸಾಧ್ಯತೆಯಿದೆ.
ಇನ್ನು ನರೇಂದ್ರ ಮೋದಿಯವರು ಎರಡನೇ ಬಾರಿ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ ಜಿ-20 ರಾಷ್ಟ್ರಗಳ ನಾಯಕರುಗಳಿಗೆ ಆಹ್ವಾನ ನೀಡಲಾಗುತ್ತಿದೆ. ಮೋದಿಯವರ ಜೊತೆ ಹೊಸ ಸಚಿವರುಗಳು ಕೂಡ 30ರಂದೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT