ನರೇಂದ್ರ ಮೋದಿ 
ದೇಶ

'ಯಾವತ್ತೂ ಅಹಂಕಾರ ಬರಬಾರದು': ನೂತನ ಸಂಸದರಿಗೆ ಪ್ರಧಾನಿ ಮೋದಿ ಪಾಠ

ನಮಗೆ ಯಾವತ್ತೂ ಅಹಂಕಾರ ಬರಬಾರದು. ಅಹಂಕಾರವನ್ನು ಎಷ್ಟು ದೂರ ತಳ್ಳುತ್ತೇವೆಯೇ ಅಷ್ಟು ನಮಗೆ ಒಳ್ಳೆಯದು ಎಂದು ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ನಮಗೆ ಯಾವತ್ತೂ ಅಹಂಕಾರ ಬರಬಾರದು. ಅಹಂಕಾರವನ್ನು ಎಷ್ಟು ದೂರ ತಳ್ಳುತ್ತೇವೆಯೇ ಅಷ್ಟು ನಮಗೆ ಒಳ್ಳೆಯದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೂತನ ಸಂಸದರಿಗೆ ಪಾಠ ಮಾಡಿದ್ದಾರೆ.
ಇಂದು ಸಂಸತ್ ನ ಸೆಂಟ್ರಲ್ ಹಾಲ್ ನಲ್ಲಿ ಬಿಜೆಪಿ ಸಂಸದೀಯ ನಾಯಕರಾಗಿ ಆಯ್ಕೆಯಾದ ನಂತರ ಪಕ್ಷದ ನೂತನ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಎನ್‌ಡಿಎಗೆ 353 ಸ್ಥಾನ ಕೊಟ್ಟಿರುವ ಜನ ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದರು.
ಎನ್‌ಡಿಎಗೆ ಈ ಪರಿಯ ಜನ ಬೆಂಬಲ ದೊರೆತಿರುವುದಕ್ಕೆ ನಾವು ಖುಷಿ ಪಡುವುದಕ್ಕಿಂತ ಇನ್ನಷ್ಟು ಎಚ್ಚೆತ್ತುಕೊಳ್ಳಬೇಕು. ಏಕೆಂದರೆ ಪ್ರತಿ ಬಾರಿಯೂ ನಮ್ಮ ಯಶಸ್ಸು ನಮ್ಮ ಮೇಲಿನ ಜವಾಬ್ದಾರಿಯ ಹೊರೆಯನ್ನು ಹೆಚ್ಚಿಸುತ್ತದೆ. ಈ ವಿಶ್ವಾಸವನ್ನು ನಾವು ಉಳಿಸಿಕೊಳ್ಳಲು ಪ್ರಯತ್ನಿಸಬೇಕು. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಮೋದಿ ಹೇಳಿದರು.
ಈ ಜನಾದೇಶ ನಮ್ಮ ಜವಾಬ್ದಾರಿಗಳನ್ನು ಮತ್ತಷ್ಟು ಹೆಚ್ಚಿಸಿದೆ. ಈ ಜವಾಬ್ದಾರಿಯನ್ನು ಎಲ್ಲರೂ ಸಮರ್ಥವಾಗಿ ನಿಭಾಯಿಸಬೇಕು. ದೇಶದ ರಾಜಕೀಯದಲ್ಲಿ ಬದಲಾವಣೆ ಬಂದಿದೆ. ಅಧಿಕಾರ ಮತದಾರರ ಮೇಲೆ ಎಂದೂ ಪ್ರಭಾವಿಸಲ್ಲ. ಜನ ನಮ್ಮನ್ನು ಆರಿಸಿದ್ದು ನಮ್ಮ ಸೇವಾಭಾವ ನೋಡಿ ಎಂದರು.
ನನ್ನ ಆಯ್ಕೆ ಪ್ರಜಾತಂತ್ರ ವ್ಯವಸ್ಥೆಯ ಒಂದು ಭಾಗ. ನಾನು ಕೂಡ ನಿಮ್ಮಂತೆಯೇ ಓರ್ವ ಸಂಸದ. ಮತದಾರರ ಪ್ರಬುದ್ಧತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೊಸ ನಾಯಕತ್ವವನ್ನು ದೇಶದ ಜನ ಗುರುತಿಸಿದ್ದಾರೆ. ದೇಶದ ಜನ ಸಕಾರಾತ್ಮಕವಾಗಿ ಮತದಾನ ಮಾಡಿದ್ದಾರೆ. ದೇಶದಲ್ಲಿ ಉತ್ತಮ ಕೆಲಸಗಳಾಗಬೇಕೆಂದು ಜನ ಬೆಂಬಲ ಸಿಕ್ಕಿದೆ. ದೇಶದ ಅಭಿವೃದ್ಧಿ ಕನಸಿಗೆ 130 ಕೋಟಿ ಜನರಿಂದ ಸಾಥ್ ನೀಡಿದ್ಧಾರೆ ಎಂದರು.
ಇದಕ್ಕೂ ಮುನ್ನ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಸಂವಿಧಾನದ ಫಲಕಕ್ಕೆ ಶಿರಬಾಗಿ ನಮಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT