ಸ್ಮೃತಿ ಇರಾನಿ ಆಪ್ತನ ಹತ್ಯೆ: ಇಬ್ಬರು ಶಂಕಿತರು ಪೋಲೀಸ್ ವಶಕ್ಕೆ 
ದೇಶ

ಸ್ಮೃತಿ ಇರಾನಿ ಆಪ್ತನ ಹತ್ಯೆ: ಇಬ್ಬರು ಶಂಕಿತರು ಪೋಲೀಸ್ ವಶಕ್ಕೆ

ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ವಿರುದ್ಧ ಜಯಭೇರಿ ಬಾರಿಸಿದ್ದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಪ್ತನ ಕೊಲೆಗೆ ಸಂಬಂಧಿಸಿ ಇಬ್ಬರು ಶಂಕಿತರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಅಮೇಥಿ: ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ವಿರುದ್ಧ ಜಯಭೇರಿ ಬಾರಿಸಿದ್ದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಪ್ತನ ಕೊಲೆಗೆ ಸಂಬಂಧಿಸಿ ಇಬ್ಬರು ಶಂಕಿತರನ್ನು   ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಮೃತಿ ಇರಾನಿ ಆಪ್ತ ಸುರೇಂದ್ರ ಸಿಂಗ್ ಅವರನ್ನು ಶನಿವಾರ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಪ್ರಕರಣವನ್ನು ಗಂಬೀರವಾಗಿ ಪರಿಗಣಿಸಿರುವ ಪೋಲೀಸ್ ಇಲಾಖೆ ಹತ್ಯೆಗೆ ಸಂಬಂಧಿಸಿ ಶಂಕಿತನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
ಸುರೇಂದ್ರ ಸಿಂಗ್ ಹತ್ಯೆಗೆ ನೈಜ ಕಾರಣವಿನ್ನೂ ಪತ್ತೆಯಾಗಿಲ್ಲ. ರಾಜಕೀಯ ವೈಷಮ್ಯ ಕೊಲೆಗೆ ಕಾರಣವೆಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 
ಈ ನಡುವೆ ಸಂಸದೆ ಸ್ಮೃತಿ ಇರಾನಿ ತಾವು ಹತ್ಯೆಗೀಡಾದ ಸುರೇಂದ್ರ ಸಿಂಗ್ ಅವರ ಮನೆಗೆ ಧಾವಿಸಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಹೊರೋದ್ಯಾರು ಅಂಬಾರಿ?