ಸ್ಮೃತಿ ಇರಾನಿ ಆಪ್ತನ ಹತ್ಯೆ: ಇಬ್ಬರು ಶಂಕಿತರು ಪೋಲೀಸ್ ವಶಕ್ಕೆ 
ದೇಶ

ಸ್ಮೃತಿ ಇರಾನಿ ಆಪ್ತನ ಹತ್ಯೆ: ಇಬ್ಬರು ಶಂಕಿತರು ಪೋಲೀಸ್ ವಶಕ್ಕೆ

ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ವಿರುದ್ಧ ಜಯಭೇರಿ ಬಾರಿಸಿದ್ದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಪ್ತನ ಕೊಲೆಗೆ ಸಂಬಂಧಿಸಿ ಇಬ್ಬರು ಶಂಕಿತರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಅಮೇಥಿ: ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ವಿರುದ್ಧ ಜಯಭೇರಿ ಬಾರಿಸಿದ್ದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಪ್ತನ ಕೊಲೆಗೆ ಸಂಬಂಧಿಸಿ ಇಬ್ಬರು ಶಂಕಿತರನ್ನು   ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಮೃತಿ ಇರಾನಿ ಆಪ್ತ ಸುರೇಂದ್ರ ಸಿಂಗ್ ಅವರನ್ನು ಶನಿವಾರ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಪ್ರಕರಣವನ್ನು ಗಂಬೀರವಾಗಿ ಪರಿಗಣಿಸಿರುವ ಪೋಲೀಸ್ ಇಲಾಖೆ ಹತ್ಯೆಗೆ ಸಂಬಂಧಿಸಿ ಶಂಕಿತನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
ಸುರೇಂದ್ರ ಸಿಂಗ್ ಹತ್ಯೆಗೆ ನೈಜ ಕಾರಣವಿನ್ನೂ ಪತ್ತೆಯಾಗಿಲ್ಲ. ರಾಜಕೀಯ ವೈಷಮ್ಯ ಕೊಲೆಗೆ ಕಾರಣವೆಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 
ಈ ನಡುವೆ ಸಂಸದೆ ಸ್ಮೃತಿ ಇರಾನಿ ತಾವು ಹತ್ಯೆಗೀಡಾದ ಸುರೇಂದ್ರ ಸಿಂಗ್ ಅವರ ಮನೆಗೆ ಧಾವಿಸಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ ನಂತರವೂ ತೈಲ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ: ಇರಾನ್

ಮೋದಿ ರ‍್ಯಾಲಿಗೆ ಮುನ್ನ ಕೋಲ್ಕತ್ತಾದಲ್ಲಿ TMC, BJP ಕಾರ್ಯಕರ್ತರ ನಡುವೆ ಮಾರಾಮಾರಿ; ಪರಸ್ಪರ ಕಲ್ಲು ತೂರಾಟ

'ರನ್-ಔಟ್ ಹೆಸರಿನಲ್ಲಿ ನಂಬಿಕೆ ದ್ರೋಹ': ಭಾರತದ ಮಾಜಿ ಕ್ರಿಕೆಟಿಗ Mohammad Kaif ಕಿಡಿ, ಹೇಳಿದ್ದು ಯಾರಿಗೆ?

4,824 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಸರ್ಕಾರ ಸಮ್ಮತಿ: ರಾಜ್ಯದಲ್ಲಿ 14,525 ಉದ್ಯೋಗ ಅವಕಾಶ ಸೃಷ್ಟಿ!

ನಿಮ್ ಕೈಲಾಗಲ್ಲ ಅಂದ್ರೆ ರಾಜಿನಾಮೆ ನೀಡಿ: 'ನಮಾಜ್ ಆದೇಶ' ಪಾಲನೆ ಕುರಿತು ಹೈಕೋರ್ಟ್ ಕೆಂಡಾಮಂಡಲ!

SCROLL FOR NEXT