ವೈಎಸ್ ಜಗನ್ ಮೋಹನ್ ರೆಡ್ಡಿ - ನರಸಿಂಹನ್ 
ದೇಶ

ಆಂಧ್ರದಲ್ಲಿ ಸರ್ಕಾರ ರಚಿಸುವಂತೆ ಜಗನ್ ಮೋಹನ್ ರೆಡ್ಡಿಗೆ ರಾಜ್ಯಪಾಲರಿಂದ ಆಹ್ವಾನ

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ(ವೈಎಸ್‌ಆರ್‌ಸಿ) ಅಧ್ಯಕ್ಷ ....

ಹೈದರಾಬಾದ್: ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ(ವೈಎಸ್‌ಆರ್‌ಸಿ) ಅಧ್ಯಕ್ಷ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಅವರಿಗೆ ಸರ್ಕಾರ ರಚಿಸುವಂತೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಪಾಲ ಇ.ಎಸ್.ಎಲ್ ನರಸಿಂಹನ್ ಅವರು ಶನಿವಾರ ಆಹ್ವಾನ ನೀಡಿದ್ದಾರೆ.
ರಾಜ್ಯಪಾಲರ ಆಹ್ವಾನದ ಹಿನ್ನೆಲೆಯಲ್ಲಿ ಜಗನ್ ಮೋಹನ್ ರೆಡ್ಡಿ ಅವರು ಇಂದು ರಾತ್ರಿ ರಾಜಭವನಕ್ಕೆ ತೆರಳಿ ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.
ಇದಕ್ಕು ಮುನ್ನ ವೈಎಸ್ ಆರ್ ಕಾಂಗ್ರೆಸ್ ನಾಯಕ ಬೊಸ್ತ ಸತ್ಯನಾರಾಯಣ ಮತ್ತು ಇತರೆ ಚುನಾಯಿತ ಸದಸ್ಯರು ರಾಜಭವನಕ್ಕೆ ತೆರಳಿ, ಪಕ್ಷದ ನೂತನ ಶಾಸಕರು ಜಗನ್ ಅವರನ್ನು ವೈಎಸ್ ಆರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದ ನಿರ್ಣಯವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದರು. ಅಲ್ಲದೆ ಸರ್ಕಾರ ರಚನೆಗೆ ಆಹ್ವಾನಿಸುವಂತೆ ಮನವಿ ಮಾಡಿದ್ದರು.
ರಾಜ್ಯಪಾಲರ ಭೇಟಿಯ ಬಳಿಕ ಜಗನ್ ಮೋಹನ್ ರೆಡ್ಡಿ ಅವರು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನಿವಾಸಕ್ಕೆ ತೆರಳಿ, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದರು.
ಜಗನ್ ಮೋಹನ್ ರೆಡ್ಡಿ ಅವರು ಮೇ 30ರಂದು ವಿಜಯವಾಡದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT