ದೇಶ

ಮುಂದಿನ 5 ವರ್ಷಗಳು ನಮಗೆ ಅತ್ಯಂತ ಮಹತ್ವ: ನಿಯೋಜಿತ ಪ್ರಧಾನಿ ಮೋದಿ

Sumana Upadhyaya
ಅಹಮದಾಬಾದ್: ವಿಶ್ವದ ವ್ಯವಸ್ಥೆಯಲ್ಲಿ ಭಾರತ ಕಳೆದುಕೊಂಡ ಸ್ಥಾನವನ್ನು ಮತ್ತೆ ಪಡೆಯಲು ಲೋಕಸಭೆ ಚುನಾವಣೆಯಲ್ಲಿ ದೇಶದ ಜನರು ಸ್ಪಷ್ಟ ತೀರ್ಪು ನೀಡಿ ನಮಗೆ ಮತ್ತೊಮ್ಮೆ ಅವಕಾಶ ನೀಡಿದ್ದಾರೆ ಎಂದು ನಿಯೋಜಿತ ಪ್ರಧಾನ ಮಂತ್ರಿ ನರೇಂದ್ರ  ಮೋದಿ ಹೇಳಿದ್ದಾರೆ.
ಗುಜರಾತ್ ನ ಬಿಜೆಪಿ ಘಟಕ ನಿನ್ನೆ ಅಹಮದಾಬಾದ್ ನಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಕಂಡರು ಸಹ ಅಹಂಕಾರದಿಂದ ಮೆರೆಯದೆ ವಿನಮ್ರತೆಯಿಂದ ನಡೆದುಕೊಳ್ಳುವಂತೆ ನೂತನ ಸಂಸದರಿಗೆ ಕಿವಿಮಾತು ಹೇಳಿದರು.
ಭಾರತ ಮತ್ತು ವಿಶ್ವದಲ್ಲಿ ತೆಗೆದುಕೊಂಡರೆ ಮುಂದಿನ 5 ವರ್ಷಗಳ ಸಮಯ ಅತ್ಯಂತ ಮಹತ್ವದ್ದಾಗಿರುತ್ತದೆ. ಅದೃಷ್ಟವಶಾತ್, ನಮಗೆ ಈ ಬಾರಿ ಸ್ಪಷ್ಟ ಸಂಪೂರ್ಣ ಬಹುಮತ ಸಿಕ್ಕಿದೆ, ಅದರ ಜೊತೆಗೆ ಎನ್ ಡಿಎ ಮೈತ್ರಿಕೂಟಗಳ ಬೆಂಬಲ ಕೂಡ ಇದೆ. 1942ರಿಂದ 1947ರವರೆಗೆ ಭಾರತದ ಇತಿಹಾಸದಲ್ಲಿ ಮಹತ್ವದ್ದಾಗಿದ್ದಂತೆ ಮುಂದಿನ 5 ವರ್ಷಗಳ ಸಮಯ ಅತ್ಯಂತ ಪ್ರಮುಖವಾಗಿರುತ್ತದೆ ಎಂದರು.
SCROLL FOR NEXT