ಅಹಮದಾಬಾದ್ ನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ 
ದೇಶ

ಮುಂದಿನ 5 ವರ್ಷಗಳು ನಮಗೆ ಅತ್ಯಂತ ಮಹತ್ವ: ನಿಯೋಜಿತ ಪ್ರಧಾನಿ ಮೋದಿ

ವಿಶ್ವದ ವ್ಯವಸ್ಥೆಯಲ್ಲಿ ಭಾರತ ಕಳೆದುಕೊಂಡ ಸ್ಥಾನವನ್ನು ಮತ್ತೆ ಪಡೆಯಲು ಲೋಕಸಭೆ ...

ಅಹಮದಾಬಾದ್: ವಿಶ್ವದ ವ್ಯವಸ್ಥೆಯಲ್ಲಿ ಭಾರತ ಕಳೆದುಕೊಂಡ ಸ್ಥಾನವನ್ನು ಮತ್ತೆ ಪಡೆಯಲು ಲೋಕಸಭೆ ಚುನಾವಣೆಯಲ್ಲಿ ದೇಶದ ಜನರು ಸ್ಪಷ್ಟ ತೀರ್ಪು ನೀಡಿ ನಮಗೆ ಮತ್ತೊಮ್ಮೆ ಅವಕಾಶ ನೀಡಿದ್ದಾರೆ ಎಂದು ನಿಯೋಜಿತ ಪ್ರಧಾನ ಮಂತ್ರಿ ನರೇಂದ್ರ  ಮೋದಿ ಹೇಳಿದ್ದಾರೆ.
ಗುಜರಾತ್ ನ ಬಿಜೆಪಿ ಘಟಕ ನಿನ್ನೆ ಅಹಮದಾಬಾದ್ ನಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಕಂಡರು ಸಹ ಅಹಂಕಾರದಿಂದ ಮೆರೆಯದೆ ವಿನಮ್ರತೆಯಿಂದ ನಡೆದುಕೊಳ್ಳುವಂತೆ ನೂತನ ಸಂಸದರಿಗೆ ಕಿವಿಮಾತು ಹೇಳಿದರು.
ಭಾರತ ಮತ್ತು ವಿಶ್ವದಲ್ಲಿ ತೆಗೆದುಕೊಂಡರೆ ಮುಂದಿನ 5 ವರ್ಷಗಳ ಸಮಯ ಅತ್ಯಂತ ಮಹತ್ವದ್ದಾಗಿರುತ್ತದೆ. ಅದೃಷ್ಟವಶಾತ್, ನಮಗೆ ಈ ಬಾರಿ ಸ್ಪಷ್ಟ ಸಂಪೂರ್ಣ ಬಹುಮತ ಸಿಕ್ಕಿದೆ, ಅದರ ಜೊತೆಗೆ ಎನ್ ಡಿಎ ಮೈತ್ರಿಕೂಟಗಳ ಬೆಂಬಲ ಕೂಡ ಇದೆ. 1942ರಿಂದ 1947ರವರೆಗೆ ಭಾರತದ ಇತಿಹಾಸದಲ್ಲಿ ಮಹತ್ವದ್ದಾಗಿದ್ದಂತೆ ಮುಂದಿನ 5 ವರ್ಷಗಳ ಸಮಯ ಅತ್ಯಂತ ಪ್ರಮುಖವಾಗಿರುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT