ಅಹಮದಾಬಾದ್ ನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ 
ದೇಶ

ಮುಂದಿನ 5 ವರ್ಷಗಳು ನಮಗೆ ಅತ್ಯಂತ ಮಹತ್ವ: ನಿಯೋಜಿತ ಪ್ರಧಾನಿ ಮೋದಿ

ವಿಶ್ವದ ವ್ಯವಸ್ಥೆಯಲ್ಲಿ ಭಾರತ ಕಳೆದುಕೊಂಡ ಸ್ಥಾನವನ್ನು ಮತ್ತೆ ಪಡೆಯಲು ಲೋಕಸಭೆ ...

ಅಹಮದಾಬಾದ್: ವಿಶ್ವದ ವ್ಯವಸ್ಥೆಯಲ್ಲಿ ಭಾರತ ಕಳೆದುಕೊಂಡ ಸ್ಥಾನವನ್ನು ಮತ್ತೆ ಪಡೆಯಲು ಲೋಕಸಭೆ ಚುನಾವಣೆಯಲ್ಲಿ ದೇಶದ ಜನರು ಸ್ಪಷ್ಟ ತೀರ್ಪು ನೀಡಿ ನಮಗೆ ಮತ್ತೊಮ್ಮೆ ಅವಕಾಶ ನೀಡಿದ್ದಾರೆ ಎಂದು ನಿಯೋಜಿತ ಪ್ರಧಾನ ಮಂತ್ರಿ ನರೇಂದ್ರ  ಮೋದಿ ಹೇಳಿದ್ದಾರೆ.
ಗುಜರಾತ್ ನ ಬಿಜೆಪಿ ಘಟಕ ನಿನ್ನೆ ಅಹಮದಾಬಾದ್ ನಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಕಂಡರು ಸಹ ಅಹಂಕಾರದಿಂದ ಮೆರೆಯದೆ ವಿನಮ್ರತೆಯಿಂದ ನಡೆದುಕೊಳ್ಳುವಂತೆ ನೂತನ ಸಂಸದರಿಗೆ ಕಿವಿಮಾತು ಹೇಳಿದರು.
ಭಾರತ ಮತ್ತು ವಿಶ್ವದಲ್ಲಿ ತೆಗೆದುಕೊಂಡರೆ ಮುಂದಿನ 5 ವರ್ಷಗಳ ಸಮಯ ಅತ್ಯಂತ ಮಹತ್ವದ್ದಾಗಿರುತ್ತದೆ. ಅದೃಷ್ಟವಶಾತ್, ನಮಗೆ ಈ ಬಾರಿ ಸ್ಪಷ್ಟ ಸಂಪೂರ್ಣ ಬಹುಮತ ಸಿಕ್ಕಿದೆ, ಅದರ ಜೊತೆಗೆ ಎನ್ ಡಿಎ ಮೈತ್ರಿಕೂಟಗಳ ಬೆಂಬಲ ಕೂಡ ಇದೆ. 1942ರಿಂದ 1947ರವರೆಗೆ ಭಾರತದ ಇತಿಹಾಸದಲ್ಲಿ ಮಹತ್ವದ್ದಾಗಿದ್ದಂತೆ ಮುಂದಿನ 5 ವರ್ಷಗಳ ಸಮಯ ಅತ್ಯಂತ ಪ್ರಮುಖವಾಗಿರುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT