ಅಹಮದಾಬಾದ್ ನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ 
ದೇಶ

ಮುಂದಿನ 5 ವರ್ಷಗಳು ನಮಗೆ ಅತ್ಯಂತ ಮಹತ್ವ: ನಿಯೋಜಿತ ಪ್ರಧಾನಿ ಮೋದಿ

ವಿಶ್ವದ ವ್ಯವಸ್ಥೆಯಲ್ಲಿ ಭಾರತ ಕಳೆದುಕೊಂಡ ಸ್ಥಾನವನ್ನು ಮತ್ತೆ ಪಡೆಯಲು ಲೋಕಸಭೆ ...

ಅಹಮದಾಬಾದ್: ವಿಶ್ವದ ವ್ಯವಸ್ಥೆಯಲ್ಲಿ ಭಾರತ ಕಳೆದುಕೊಂಡ ಸ್ಥಾನವನ್ನು ಮತ್ತೆ ಪಡೆಯಲು ಲೋಕಸಭೆ ಚುನಾವಣೆಯಲ್ಲಿ ದೇಶದ ಜನರು ಸ್ಪಷ್ಟ ತೀರ್ಪು ನೀಡಿ ನಮಗೆ ಮತ್ತೊಮ್ಮೆ ಅವಕಾಶ ನೀಡಿದ್ದಾರೆ ಎಂದು ನಿಯೋಜಿತ ಪ್ರಧಾನ ಮಂತ್ರಿ ನರೇಂದ್ರ  ಮೋದಿ ಹೇಳಿದ್ದಾರೆ.
ಗುಜರಾತ್ ನ ಬಿಜೆಪಿ ಘಟಕ ನಿನ್ನೆ ಅಹಮದಾಬಾದ್ ನಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಕಂಡರು ಸಹ ಅಹಂಕಾರದಿಂದ ಮೆರೆಯದೆ ವಿನಮ್ರತೆಯಿಂದ ನಡೆದುಕೊಳ್ಳುವಂತೆ ನೂತನ ಸಂಸದರಿಗೆ ಕಿವಿಮಾತು ಹೇಳಿದರು.
ಭಾರತ ಮತ್ತು ವಿಶ್ವದಲ್ಲಿ ತೆಗೆದುಕೊಂಡರೆ ಮುಂದಿನ 5 ವರ್ಷಗಳ ಸಮಯ ಅತ್ಯಂತ ಮಹತ್ವದ್ದಾಗಿರುತ್ತದೆ. ಅದೃಷ್ಟವಶಾತ್, ನಮಗೆ ಈ ಬಾರಿ ಸ್ಪಷ್ಟ ಸಂಪೂರ್ಣ ಬಹುಮತ ಸಿಕ್ಕಿದೆ, ಅದರ ಜೊತೆಗೆ ಎನ್ ಡಿಎ ಮೈತ್ರಿಕೂಟಗಳ ಬೆಂಬಲ ಕೂಡ ಇದೆ. 1942ರಿಂದ 1947ರವರೆಗೆ ಭಾರತದ ಇತಿಹಾಸದಲ್ಲಿ ಮಹತ್ವದ್ದಾಗಿದ್ದಂತೆ ಮುಂದಿನ 5 ವರ್ಷಗಳ ಸಮಯ ಅತ್ಯಂತ ಪ್ರಮುಖವಾಗಿರುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT