ಮಧ್ಯಪ್ರದೇಶದ ಕಾಂಗ್ರೆಸ್ ನಲ್ಲೇ ಒಡಕು ಮೂಡಿಸಿದ ಮೋದಿ ಅಭೂತ ಪೂರ್ವ ಗೆಲುವು! 
ದೇಶ

ಮಧ್ಯಪ್ರದೇಶದ ಕಾಂಗ್ರೆಸ್ ನಲ್ಲೇ ಒಡಕು ಮೂಡಿಸಿದ ಮೋದಿ ಅಭೂತ ಪೂರ್ವ ಗೆಲುವು!

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡು ಕೇಳರಿಯದಷ್ಟು ಬಹುಮತ ಪಡೆದಿರುವುದು ಈಗ ಕೆಲವೇ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾರಕವಾಗಿ ಪರಿಣಮಿಸಿದೆ.

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡು ಕೇಳರಿಯದಷ್ಟು ಬಹುಮತ ಪಡೆದಿರುವುದು ಈಗ ಕೆಲವೇ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾರಕವಾಗಿ ಪರಿಣಮಿಸಿದೆ. 
ಎನ್ ಡಿ ಟಿವಿ ವರದಿಯ ಪ್ರಕಾರ ಚುನಾವಣಾ ಫಲಿತಾಂಶದ ಬಳಿಕ ಮಧ್ಯಪ್ರದೇಶದ ಸಿಎಂ ಕಮಲ್ ನಾಥ್ ಗೆ ಆಂತರಿಕ ಭಿನ್ನಮತದ ಸಮಸ್ಯೆ ಎದುರಾಗಿದ್ದು, ಕಾಂಗ್ರೆಸ್ ಗೆ ಸರ್ಕಾರ ಉಳಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ. 
ಸರ್ಕಾರದಲ್ಲಿ ಭಿನ್ನಮತ ಹೋಗಲಾಡಿಸುವುದಕ್ಕಾಗಿ ಕಮಲ್ ನಾಥ್ ಸರಣಿ ಸಭೆಗಳನ್ನು ನಡೆಸುತ್ತಿದೆ. ಈ ನಡುವೆ ಕಾಂಗ್ರೆಸ್  ನ ನಾಯಕರೇ ಕಮಲ್ ನಾಥ್ ರಾಜೀನಾಮೆ ಬಗ್ಗೆ ವದಂತಿ ಹಬ್ಬಿಸುತ್ತಿದ್ದಾರೆ. ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದ ದೀಪಕ್ ಬಾಬರಿಯಾ ಕಮಲ್ ನಾಥ್ ಪಕ್ಷದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಹೇಳಿಕೆ ನೀಡಿದ್ದರು ಈ ಬೆನ್ನಲ್ಲೇ ಕಮಲ್ ನಾಥ್ ಸ್ಪಷ್ಟನೆ ಕೊಡಬೇಕಾಯಿತು.
ಇತ್ತ ಬಿಜೆಪಿಯಿಂದಲೂ ಸಹ ಸರ್ಕಾರಕ್ಕೆ ಅಪಾಯ ಇದ್ದು, ಕರ್ನಾಟಕದ ಮಾದರಿಯಲ್ಲೇ ಮಧ್ಯಪ್ರದೇಶ ಸರ್ಕಾರ ಸಹ ಪತನಗೊಳ್ಳುವ ಭೀತಿ ಎದುರಿಸುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT