ಬಾಬಾ ರಾಮ್ ದೇವ್ 
ದೇಶ

ಮೇ 23 ಅನ್ನು ‘ಮೋದಿ ದಿವಸ್​’ ಎಂದು ಆಚರಿಸಬೇಕು: ಬಾಬಾ ರಾಮ್​ದೇವ್

ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಚುನಾವಣಾ ಫಲಿತಾಂಶ...

ಹರಿದ್ವಾರ: ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಚುನಾವಣಾ ಫಲಿತಾಂಶ ಪ್ರಕಟಗೊಂಡ ಮೇ 23 ಅನ್ನು ‘ಮೋದಿ ದಿವಸ್​’ ಎಂದು ಆಚರಿಸಬೇಕು ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು ಹೇಳಿದ್ದಾರೆ.
ಇಂದು ಹರಿದ್ವಾರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಬಾಬಾ ರಾಮ್ ದೇವ್ ಅವರು, ಮೋದಿ ಕೋಟ್ಯಂತರ ಜನರ ನಂಬಿಕೆ ಗೆದ್ದಿದ್ದಾರೆ. ಒಂದು ಕಡೆ ಮಹಾಘಟ್​ಬಂಧನ್​, ಇನ್ನೊಂದು ಕಡೆ ಮೋದಿ ಚುನಾವಣೆಯಲ್ಲಿ ಹೋರಾಟ ನಡೆಸಿದರು. ಆದರೂ ಉತ್ತರ ಪ್ರದೇಶದಲ್ಲಿ ಮೋದಿ ಅವರು ಭರ್ಜರಿ ಜಯ ಸಾಧಿಸಿದರು. ಜನತೆ ಅವರ ಕೈಯಲ್ಲಿ ಸುರಕ್ಷಿತವಾಗಿದ್ದಾರೆ ಎಂದರು.
ಮೇ 23 ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಬಹುದೊಡ್ಡ ಜನಾದೇಶವನ್ನು ಗೆದ್ದ ಐತಿಹಾಸಿಕ ದಿನವಾಗಿದೆ. ಈ ದಿನವನ್ನು ಮೋದಿ ದಿವಸ್ ಅಥವಾ ಲೋಕ ಕಲ್ಯಾಣ್ ದಿವಸ್ ಎಂದು ಆಚರಿಸಬೇಕು ಎಂದರು
ಇದೇ ವೇಳೆ ಗೋವಿನ ವಧೆಯನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿದ ಅವರು, ಹಸುವಿನ ಕಳ್ಳಸಾಗಣೆ ಮತ್ತು ಗೋರಕ್ಷಕರ ನಡುವಿನ ಘರ್ಷಣೆ ತಪ್ಪಿಸಲು ಇದೊಂದೇ ಮಾರ್ಗ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT