ಪ್ರಮಾಣ ವಚನಕ್ಕೂ ಮುನ್ನ ವಾರಾಣಸಿ ವಿಶ್ವನಾಥ ಮಂದಿರಲ್ಲಿ ನರೇಂದ್ರ ಮೋದಿ ಪೂಜೆ 
ದೇಶ

ವಾರಾಣಸಿ: ಕಾಶಿ ವಿಶ್ವನಾಥ ಮಂದಿರಲ್ಲಿ ನರೇಂದ್ರ ಮೋದಿ ಪೂಜೆ

2019 ರ ಲೋಕಸಭಾ ಚುನಾವಣೆಯ ಅಭೂತಪೂರ್ವ ವಿಜಯದ ಬಳಿಕ, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

2019 ರ ಲೋಕಸಭಾ ಚುನಾವಣೆಯ ಅಭೂತಪೂರ್ವ ವಿಜಯದ ಬಳಿಕ, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. 
ಅಮಿತ್ ಶಾ ಅವರೊಂದಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ವಿಶ್ವನಾಥ ಮಂದಿರಲ್ಲಿ ಶಿವಲಿಂಗಕ್ಕೆ ಪಂಚಾಮೃತ ಅಭಿಷೇಕ ನೆರವೇರಿಸಿದ್ದು, , ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಹ ಭಾಗಿಯಾಗಿದ್ದರು.   
ಮೇ.30 ರಂದು ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. 2014 ರಲ್ಲಿಯೂ ಸಹ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಕಾಶಿ ವಿಶ್ವನಾಥ ಮಂದಿರದಲ್ಲಿ ಪೂಜೆ ಸಲ್ಲಿಸಿದ್ದರು. 
ವಾರಾಣಸಿ ಸ್ವತಃ ಪ್ರಧಾನಿ ಮೋದಿ ಅವರ ಸ್ವಕ್ಷೇತ್ರವಾಗಿದ್ದು, ತಮ್ಮನ್ನು ಗೆಲ್ಲಿಸಿದ ಮತದಾರರಿಗೆ ಪ್ರಧಾನಿ ಮೋದಿ ಇಂದು ಧನ್ಯವಾದ ತಿಳಿಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT